ನೌಕಾಪಡೆ ಸಿಬ್ಬಂದಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಮುಕ್ತಾಯಗೊಳಿಸಲು ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ಅವರ ಅಧ್ಯಕ್ಷತೆಯ ಮೂವರು ನ್ಯಾಯಮೂರ್ತಿಗಳ ಪೀಠವು ₹ 10 ಕೋಟಿ ಮೊತ್ತವನ್ನು ಠೇವಣಿ ರೂಪದಲ್ಲಿ ಇಡಲಾಗಿದೆಯೇ ಎಂದು ಕೇಂದ್ರ ಸರ್ಕಾರದ ಪರ ವಕೀಲರನ್ನು ಕೇಳಿತು.