<p><strong>ನವದೆಹಲಿ:</strong> ‘ಕಾಶಿ ಹಾಗೂ ಮಥುರಾ ವಿವಾದಗಳನ್ನೂ ಹಿಂದೂಗಳ ಪರವಾಗಿಯೇ ಇತ್ಯರ್ಥಗೊಳಿಸಬೇಕು’ ಎಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಗುರುವಾರ ಹೇಳಿದರು.</p>.<p>‘ಈ ವಿವಾದಾಸ್ಪದ ವಿಚಾರಗಳ ಬಗ್ಗೆ ಅಂತಿಮ ನಿರ್ಧಾರವನ್ನು ಸಂತರೇ ತೆಗೆದುಕೊಳ್ಳಲಿದ್ದಾರೆ’ ಎಂದು ಅವರು ಸ್ಪಷ್ಟಪಡಿಸಿದರು. ಕಾಶಿ ಹಾಗೂ ಮಥುರಾದಲ್ಲಿ ಮಸೀದಿಗಳು ಇರುವ ನಿವೇಶಗಳನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು' ಎಂದು ಹಲವು ಹಿಂದೂಪರ ಸಂಘಟನೆಗಳು ಬೇಡಿಕೆ ಇರಿಸಿವೆ.</p>.<p>‘ನಾನು ಸೇರಿದಂತೆ ಹಲವು ಬಿಜೆಪಿ ನಾಯಕರು ಬಾಬರಿ ಮಸೀದಿ ಧ್ವಂಸದ ಹಿಂದೆ ಇದ್ದೆವು ಎನ್ನುವ ಆರೋಪಗಳನ್ನು ಜನರು ಮಾಡುತ್ತಿದ್ದರು. ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ನಮ್ಮ ಮೇಲಿನ ಹೊರೆ ಇಳಿಸಿದೆ’ ಎಂದರು.</p>.<p>ಮಸೀದಿ ಕಟ್ಟಡವನ್ನು ಕೆಡವದೇ ಹೇಗೆ ರಾಮ ಮಂದಿರ ನಿರ್ಮಾಣ ಸಾಧ್ಯ ಎಂದು ಪ್ರಶ್ನಿಸಿದ ವಿನಯ್, ‘ಅದನ್ನು ಹೇಗೆ ಕೆಡವಲಾಯಿತು ಎನ್ನುವುದು ಬೇರೆ ವಿಷಯ. ಆದರೆ ಆ ಕಟ್ಟಡ ಧ್ವಂಸವಾಗದೇ ಇದ್ದಿದ್ದರೆ, ಇಂದು ಅಲ್ಲಿ ರಾಮ ಮಂದಿರ ನಿರ್ಮಾಣ ಸಾಧ್ಯವಾಗುತ್ತಿರಲಿಲ್ಲ’ ಎಂದರು.</p>.<p></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕಾಶಿ ಹಾಗೂ ಮಥುರಾ ವಿವಾದಗಳನ್ನೂ ಹಿಂದೂಗಳ ಪರವಾಗಿಯೇ ಇತ್ಯರ್ಥಗೊಳಿಸಬೇಕು’ ಎಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಗುರುವಾರ ಹೇಳಿದರು.</p>.<p>‘ಈ ವಿವಾದಾಸ್ಪದ ವಿಚಾರಗಳ ಬಗ್ಗೆ ಅಂತಿಮ ನಿರ್ಧಾರವನ್ನು ಸಂತರೇ ತೆಗೆದುಕೊಳ್ಳಲಿದ್ದಾರೆ’ ಎಂದು ಅವರು ಸ್ಪಷ್ಟಪಡಿಸಿದರು. ಕಾಶಿ ಹಾಗೂ ಮಥುರಾದಲ್ಲಿ ಮಸೀದಿಗಳು ಇರುವ ನಿವೇಶಗಳನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು' ಎಂದು ಹಲವು ಹಿಂದೂಪರ ಸಂಘಟನೆಗಳು ಬೇಡಿಕೆ ಇರಿಸಿವೆ.</p>.<p>‘ನಾನು ಸೇರಿದಂತೆ ಹಲವು ಬಿಜೆಪಿ ನಾಯಕರು ಬಾಬರಿ ಮಸೀದಿ ಧ್ವಂಸದ ಹಿಂದೆ ಇದ್ದೆವು ಎನ್ನುವ ಆರೋಪಗಳನ್ನು ಜನರು ಮಾಡುತ್ತಿದ್ದರು. ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ನಮ್ಮ ಮೇಲಿನ ಹೊರೆ ಇಳಿಸಿದೆ’ ಎಂದರು.</p>.<p>ಮಸೀದಿ ಕಟ್ಟಡವನ್ನು ಕೆಡವದೇ ಹೇಗೆ ರಾಮ ಮಂದಿರ ನಿರ್ಮಾಣ ಸಾಧ್ಯ ಎಂದು ಪ್ರಶ್ನಿಸಿದ ವಿನಯ್, ‘ಅದನ್ನು ಹೇಗೆ ಕೆಡವಲಾಯಿತು ಎನ್ನುವುದು ಬೇರೆ ವಿಷಯ. ಆದರೆ ಆ ಕಟ್ಟಡ ಧ್ವಂಸವಾಗದೇ ಇದ್ದಿದ್ದರೆ, ಇಂದು ಅಲ್ಲಿ ರಾಮ ಮಂದಿರ ನಿರ್ಮಾಣ ಸಾಧ್ಯವಾಗುತ್ತಿರಲಿಲ್ಲ’ ಎಂದರು.</p>.<p></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>