<p class="title"><strong>ಅಮರಾವತಿ:</strong> ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ‘ಯುವಜನ ಶ್ರಮಿಕ ರೈತ ಕಾಂಗ್ರೆಸ್’ (ವೈಎಸ್ಆರ್ಸಿ) ಪಕ್ಷದ ಅಜೀವ ಅಧ್ಯಕ್ಷರಾಗಿ ಶನಿವಾರ ಆಯ್ಕೆಯಾದರು.</p>.<p class="title">ಪಕ್ಷದ ಸಂವಿಧಾನತಿದ್ದುಪಡಿ ಮಾಡಿದ ನಂತರ ಜಗನ್ ಅವರನ್ನು ಜೀವಿತಾವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.</p>.<p class="title">ಕಾಂಗ್ರೆಸ್ ಪಕ್ಷ ತ್ಯಜಿಸಿದ ಬಳಿಕ 2011ರಲ್ಲಿ ಜಗನ್,ವೈಎಸ್ಆರ್ ಕಾಂಗ್ರೆಸ್ ಸ್ಥಾಪಿಸಿದರು. ಆಗಿನಿಂದಲೂ ಅವರೇ ಅಧ್ಯಕ್ಷರಾಗಿ ಮುಂದುವರಿದಿದ್ದು, ತಾಯಿ ವಿಜಯಮ್ಮ ಗೌರವಾಧ್ಯಕ್ಷರಾಗಿದ್ದರು.</p>.<p class="title">ಶುಕ್ರವಾರವಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದವಿಜಯಮ್ಮ, ‘ನೆರೆಯ ರಾಜ್ಯದಲ್ಲಿ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಮುನ್ನಡೆಸುತ್ತಿರುವ ಪುತ್ರಿ ಶರ್ಮಿಳಾ ಅವರಿಗೆ ಬೆಂಬಲ ನೀಡುವ ಸಲುವಾಗಿ ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಿಳಿಸಿದ್ದಾರೆ.</p>.<p class="title">ಕಡೆ ಬಾರಿ, 2017ರಲ್ಲಿ ಪಕ್ಷದ ಸಭೆಯಲ್ಲಿ ಜಗನ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು.ಜಗನ್ ಅವರನ್ನು ಜೀವಿತಾವಧಿಗೆ ಪಕ್ಷದ ಮುಖ್ಯಸ್ಥರಾಗಿರಲು ಕೇಂದ್ರ ಚುನಾವಣಾ ಆಯೋಗದ ಒಪ್ಪಿಗೆ ಪಡೆಯಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಅಮರಾವತಿ:</strong> ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ‘ಯುವಜನ ಶ್ರಮಿಕ ರೈತ ಕಾಂಗ್ರೆಸ್’ (ವೈಎಸ್ಆರ್ಸಿ) ಪಕ್ಷದ ಅಜೀವ ಅಧ್ಯಕ್ಷರಾಗಿ ಶನಿವಾರ ಆಯ್ಕೆಯಾದರು.</p>.<p class="title">ಪಕ್ಷದ ಸಂವಿಧಾನತಿದ್ದುಪಡಿ ಮಾಡಿದ ನಂತರ ಜಗನ್ ಅವರನ್ನು ಜೀವಿತಾವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.</p>.<p class="title">ಕಾಂಗ್ರೆಸ್ ಪಕ್ಷ ತ್ಯಜಿಸಿದ ಬಳಿಕ 2011ರಲ್ಲಿ ಜಗನ್,ವೈಎಸ್ಆರ್ ಕಾಂಗ್ರೆಸ್ ಸ್ಥಾಪಿಸಿದರು. ಆಗಿನಿಂದಲೂ ಅವರೇ ಅಧ್ಯಕ್ಷರಾಗಿ ಮುಂದುವರಿದಿದ್ದು, ತಾಯಿ ವಿಜಯಮ್ಮ ಗೌರವಾಧ್ಯಕ್ಷರಾಗಿದ್ದರು.</p>.<p class="title">ಶುಕ್ರವಾರವಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದವಿಜಯಮ್ಮ, ‘ನೆರೆಯ ರಾಜ್ಯದಲ್ಲಿ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಮುನ್ನಡೆಸುತ್ತಿರುವ ಪುತ್ರಿ ಶರ್ಮಿಳಾ ಅವರಿಗೆ ಬೆಂಬಲ ನೀಡುವ ಸಲುವಾಗಿ ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಿಳಿಸಿದ್ದಾರೆ.</p>.<p class="title">ಕಡೆ ಬಾರಿ, 2017ರಲ್ಲಿ ಪಕ್ಷದ ಸಭೆಯಲ್ಲಿ ಜಗನ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು.ಜಗನ್ ಅವರನ್ನು ಜೀವಿತಾವಧಿಗೆ ಪಕ್ಷದ ಮುಖ್ಯಸ್ಥರಾಗಿರಲು ಕೇಂದ್ರ ಚುನಾವಣಾ ಆಯೋಗದ ಒಪ್ಪಿಗೆ ಪಡೆಯಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>