<p><strong>ಹೈದರಾಬಾದ್: </strong>ಕೋವಿಡ್ ಪರಿಸ್ಥಿತಿಯ ನಡುವೆಯೇ ವಾರ್ಷಿಕ ಪರೀಕ್ಷೆಯನ್ನು ಆಯೋಜಿಸಲು ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಸುಪ್ರೀಂ ಕೋರ್ಟ್ ಕಟುವಾಗಿ ಪ್ರಶ್ನಿಸಿದ ಹಿಂದೆಯೇ, ಆಂಧ್ರಪ್ರದೇಶ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲು ತೀರ್ಮಾನಿಸಿದೆ.</p>.<p>ಆಂಧ್ರಪ್ರದೇಶ ಸರ್ಕಾರ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ನಡೆಸಿತು. ಕೋವಿಡ್ ಕಾರಣದಿಂದ ಎಲ್ಲ ಮಂಡಳಿಗಳು ಪರೀಕ್ಷೆ ರದ್ದುಪಡಿಸಿ, ಆಂತರಿಕ ಮೌಲ್ಯಮಾಪನಕ್ಕೆ ಮುಂದಾಗಿವೆ. ಸರ್ಕಾರ ಹೇಗೆ ಪರೀಕ್ಷೆ ನಡೆಸಲು ನಿರ್ಧರಿಸಿತು ಎಂದು ಪ್ರಶ್ನಿಸಿತು.</p>.<p>ಕೋವಿಡ್ನಿಂದಾಗಿ ಕಳೆದ ಎರಡು ತಿಂಗಳು ಮೂಡಿದ್ದ ಆರೋಗ್ಯ ಕ್ಷೇತ್ರದ ಸಂಕಷ್ಟ ಮತ್ತು ಸಂಭವನೀಯ ಮೂರನೇ ಅಲೆ ಎಚ್ಚರಿಕೆಯನ್ನು ಉಲ್ಲೇಖಿಸಿದ ಕೋರ್ಟ್, ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಏನಾದರೂ ಅವಘಡ ಸಂಭವಿಸಿದ್ದಲ್ಲಿ ತಲಾ ₹ 1 ಕೋಟಿ ಪರಿಹಾರ ನೀಡಲು ಆದೇಶಿಸಬೇಕಾದಿತು ಎಂದೂ ಎಚ್ಚರಿಸಿತ್ತು.</p>.<p>ಸುರಕ್ಷಿತವಾಗಿ ಪರೀಕ್ಷೆಯನ್ನು ಆಯೋಜಿಸಲು ಪ್ರತಿ ಕೊಠಡಿಗೆ 15–10 ವಿದ್ಯಾರ್ಥಿಗಳಂತೆ 34 ಸಾವಿರ ಕೊಠಡಿಗಳ ಅಗತ್ಯವಿದೆ. ಇಷ್ಟು ಕೊಠಡಿಗಳನ್ನು ಹೇಗೆ ಸರ್ಕಾರ ಹೊಂದಾಣಿಸಲಿದೆ ಎಂದು ಕೋರ್ಟ್ ಇದೇ ಸಂದರ್ಭದಲ್ಲಿ ಆಶ್ಚರ್ಯ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ಕೋವಿಡ್ ಪರಿಸ್ಥಿತಿಯ ನಡುವೆಯೇ ವಾರ್ಷಿಕ ಪರೀಕ್ಷೆಯನ್ನು ಆಯೋಜಿಸಲು ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಸುಪ್ರೀಂ ಕೋರ್ಟ್ ಕಟುವಾಗಿ ಪ್ರಶ್ನಿಸಿದ ಹಿಂದೆಯೇ, ಆಂಧ್ರಪ್ರದೇಶ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲು ತೀರ್ಮಾನಿಸಿದೆ.</p>.<p>ಆಂಧ್ರಪ್ರದೇಶ ಸರ್ಕಾರ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ನಡೆಸಿತು. ಕೋವಿಡ್ ಕಾರಣದಿಂದ ಎಲ್ಲ ಮಂಡಳಿಗಳು ಪರೀಕ್ಷೆ ರದ್ದುಪಡಿಸಿ, ಆಂತರಿಕ ಮೌಲ್ಯಮಾಪನಕ್ಕೆ ಮುಂದಾಗಿವೆ. ಸರ್ಕಾರ ಹೇಗೆ ಪರೀಕ್ಷೆ ನಡೆಸಲು ನಿರ್ಧರಿಸಿತು ಎಂದು ಪ್ರಶ್ನಿಸಿತು.</p>.<p>ಕೋವಿಡ್ನಿಂದಾಗಿ ಕಳೆದ ಎರಡು ತಿಂಗಳು ಮೂಡಿದ್ದ ಆರೋಗ್ಯ ಕ್ಷೇತ್ರದ ಸಂಕಷ್ಟ ಮತ್ತು ಸಂಭವನೀಯ ಮೂರನೇ ಅಲೆ ಎಚ್ಚರಿಕೆಯನ್ನು ಉಲ್ಲೇಖಿಸಿದ ಕೋರ್ಟ್, ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಏನಾದರೂ ಅವಘಡ ಸಂಭವಿಸಿದ್ದಲ್ಲಿ ತಲಾ ₹ 1 ಕೋಟಿ ಪರಿಹಾರ ನೀಡಲು ಆದೇಶಿಸಬೇಕಾದಿತು ಎಂದೂ ಎಚ್ಚರಿಸಿತ್ತು.</p>.<p>ಸುರಕ್ಷಿತವಾಗಿ ಪರೀಕ್ಷೆಯನ್ನು ಆಯೋಜಿಸಲು ಪ್ರತಿ ಕೊಠಡಿಗೆ 15–10 ವಿದ್ಯಾರ್ಥಿಗಳಂತೆ 34 ಸಾವಿರ ಕೊಠಡಿಗಳ ಅಗತ್ಯವಿದೆ. ಇಷ್ಟು ಕೊಠಡಿಗಳನ್ನು ಹೇಗೆ ಸರ್ಕಾರ ಹೊಂದಾಣಿಸಲಿದೆ ಎಂದು ಕೋರ್ಟ್ ಇದೇ ಸಂದರ್ಭದಲ್ಲಿ ಆಶ್ಚರ್ಯ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>