ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದಮಳೆಯಿಂದ ಹೈದರಾಬಾದ್ ನಗರದ ಬಹುತೇಕ ಪ್ರದೇಶಗಳು ಜಲಾವೃತವಾಗಿವೆ.
ಇಲ್ಲಿಯವರೆಗೆ 37,000ಕ್ಕಿಂತಲೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ, 33 ಮಂದಿ ಸಾವಿಗೀಡಾಗಿದ್ದಾರೆ ಎಂದು ನಗರಾಭಿವೃದ್ದಿ ಮತ್ತು ಪುರಸಭೆ ಆಡಳಿತ ಸಚಿವ ಕೆ.ಟಿ. ರಾಮರಾವ್ ಹೇಳಿದ್ದಾರೆ.