ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್ ಪ್ರವಾಹ: ರಕ್ಷಣಾ ಕಾರ್ಯಾಚರಣೆಗೆ ಸ್ಪೀಡ್ ಬೋಟ್ ಕಳುಹಿಸಲು ಜಗನ್ ಆದೇಶ

Last Updated 20 ಅಕ್ಟೋಬರ್ 2020, 1:33 IST
ಅಕ್ಷರ ಗಾತ್ರ

ಅಮರಾವತಿ: ತೆಲಂಗಾಣ ಸರ್ಕಾರದ ಮನವಿಗೆ ಪ್ರತಿಕ್ರಿಯಿಸಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೈದರಾಬಾದ್ ಪ್ರವಾಹ ರಕ್ಷಣಾ ಕಾರ್ಯಾಚರಣೆಗೆ ಸ್ಪೀಡ್ ಬೋಟ್‌ಗಳನ್ನು ಕಳುಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದಮಳೆಯಿಂದ ಹೈದರಾಬಾದ್‌ ನಗರದ ಬಹುತೇಕ ಪ್ರದೇಶಗಳು ಜಲಾವೃತವಾಗಿವೆ.
ಇಲ್ಲಿಯವರೆಗೆ 37,000ಕ್ಕಿಂತಲೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ, 33 ಮಂದಿ ಸಾವಿಗೀಡಾಗಿದ್ದಾರೆ ಎಂದು ನಗರಾಭಿವೃದ್ದಿ ಮತ್ತು ಪುರಸಭೆ ಆಡಳಿತ ಸಚಿವ ಕೆ.ಟಿ. ರಾಮರಾವ್ ಹೇಳಿದ್ದಾರೆ.

ಏತನ್ಮಧ್ಯೆ, ತೆಲಂಗಾಣದಲ್ಲಿ ಭಾರಿ ಮಳೆ ಅಕ್ಟೋಬರ್ 22 ರವರೆಗೆ ಮುಂದುವರಿಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT