ಕೇರಳ ಪುರಸಭೆಯಲ್ಲಿ 'ಜೈ ಶ್ರೀರಾಮ್' ಬ್ಯಾನರ್: ವಿವಾದ

ಪಾಲಕ್ಕಾಡ್(ಕೇರಳ): ಇದೀಗಷ್ಟೇ ಕೇರಳ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನೆರವೇರಿದ್ದು, ಫಲಿತಾಂಶ ಹೊರಬಿದ್ದಿದೆ. ಈ ಮಧ್ಯೆ ಪಾಲಕ್ಕಾಡ್ ಜಿಲ್ಲೆಯ ಪುರಸಭೆಯನ್ನು ಉಳಿಸಿಕೊಂಡಿರುವ ಬಿಜೆಪಿ ಸಂಭ್ರಮಾಚರಣೆಯ ಮಧ್ಯೆ, ಪುರಸಭೆಯ ಕಟ್ಟಡದಲ್ಲಿ 'ಜೈ ಶ್ರೀರಾಮ್' ಬ್ಯಾನರ್ ಪ್ರದರ್ಶಿಸಿರುವುದು ವಿವಾದವನ್ನು ಹುಟ್ಟು ಹಾಕಿದೆ. ಈ ಸಂಬಂಧ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.
ಡಿಸೆಂಬರ್ 16 ಬುಧವಾರ ಮತಎಣಿಕೆಯ ಬಳಿಕ ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಪುರಸಭೆಯ ಮೇಲೆ ಬಿಜೆಪಿ ಪಕ್ಷದ ಕೆಲವು ಕಾರ್ತಕರ್ತರು ಜೈ ಶ್ರೀರಾಮ್ ಬ್ಯಾನರ್ ಪ್ರದರ್ಶಿಸಿದರು.
ಕೇರಳದಲ್ಲಿ ಬಿಜೆಪಿ ಆಡಳಿತವಿರುವ ಏಕೈಕ ಪುರಸಭೆ ಪಾಲಕ್ಕಾಡ್ ಆಗಿದೆ. 52 ವಾರ್ಡ್ಗಳ ಪೈಕಿ 28ರಲ್ಲಿ ಗೆದ್ದಿರುವ ಬಿಜೆಪಿ ಅಧಿಕಾರವನ್ನು ಉಳಿಸಿಕೊಂಡಿದೆ.
ಇದನ್ನೂ ಓದಿ: ಕುಟುಂಬಗಳನ್ನು ಹಾಳು ಮಾಡುವುದೇ ಕಮಲ ಹಾಸನ್ ಕೆಲಸ: ಪಳನಿಸ್ವಾಮಿ ಟೀಕೆ
ಸಂಭ್ರಮದಲ್ಲಿದ್ದ ಪಕ್ಷದ ಕಾರ್ಯಕರ್ತರು ಪುರಸಭೆಯ ಕಟ್ಟಡದ ಮೇಲಕ್ಕೆ ಹತ್ತಿ ಜೈ ಶ್ರೀರಾಮ್ ಪತಾಕೆಯನ್ನು ನೇತು ಹಾಕಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಬ್ಯಾನರ್ಗಳನ್ನು ಪ್ರದರ್ಶಿಸಲಾಯಿತು.
ಬಳಿಕ ಪಕ್ಷದ ಮುಖಂಡರು ಎಚ್ಚರಿಕೆ ಮಾಡಿದ ಬಳಿಕ ಜೈ ಶ್ರೀರಾಮ್ ಬ್ಯಾನರ್ ಅನ್ನುತೆರವುಗೊಳಿಸಲಾಯಿತು. ಆಗಲೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಯಿತು.
ಇದು ಬಿಜೆಪಿಯ ನೈಜ ಮುಖವನ್ನು ಬಹಿರಂಗಪಡಿಸಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಹಾಗೂ ಸಿಪಿಎಂ ಪಕ್ಷಗಳು ಪೊಲೀಸ್ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.
ಇದನ್ನೂ ಓದಿ: ಫೇಸ್ಬುಕ್ ಭಾರತಕ್ಕೆ ಸುಳ್ಳು ಹೇಳುತ್ತಿದೆ: ರಾಹುಲ್ ಗಾಂಧಿ
ಪುರಸಭೆ ಸರ್ಕಾರಿ ಕಚೇರಿಯಲ್ಲಿ ಧಾರ್ಮಿಕ ಚಿಹ್ನೆಗಳನ್ನು ಪ್ರದರ್ಶಿಸುವುದರ ವಿರುದ್ಧ ಪೊಲೀಸ್ ದೂರು ಸಲ್ಲಿಸಲಾಯಿತು. ಇದರ ಆಧಾರದಲ್ಲಿ ಐಪಿಸಿ 153 ಅಡಿಯಲ್ಲಿ ಪ್ರಚೋದನಕಾರಿ ಬ್ಯಾನರ್ ಪ್ರದರ್ಶನಕ್ಕಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.