<p><strong>ಜೈಪುರ: </strong>ಸ್ಥಳೀಯ ಸಂಸ್ಥೆಯ ಆಯುಕ್ತರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಜೈಪುರ ಗ್ರೇಟರ್ ಮುನ್ಸಿಪಲ್ ಕಾರ್ಪೊರೇಶನ್ನ ಮೇಯರ್ ಮತ್ತು ಮೂವರು ಸದಸ್ಯರನ್ನು ರಾಜಸ್ಥಾನ ಸರ್ಕಾರ ಅಮಾನತುಗೊಳಿಸಿದೆ. ಈ ನಡೆಗೆ ಬಿಜೆಪಿಯಿಂದ ಭಾರಿ ಆಕ್ಷೇಪ ವ್ಯಕ್ತವಾಗಿದೆ.</p>.<p>ಕಾಂಗ್ರೆಸ್ ಸರ್ಕಾರವು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲೂ ನಿರ್ಧರಿಸಿದೆ.</p>.<p>ಸ್ಥಳೀಯ ಆಡಳಿತವು ಈ ಸಂಬಂಧ ಭಾನುವಾರ ರಾತ್ರಿ ಆದೇಶ ಹೊರಡಿಸಿದ್ದು, ಮೇಯರ್ ಸೌಮ್ಯ ಗುರ್ಜಾರ್, ಸದಸ್ಯರಾದ ಅಜಯ್ ಸಿಂಗ್ ಚೌಹಾಣ್, ಪಾರಸ್ ಸಿಂಗ್( ಈ ಮೂವರು ಬಿಜೆಪಿಗೆ ಸೇರಿದವರು) ಮತ್ತು ಶಂಕರ್ ಶರ್ಮಾ(ಪಕ್ಷೇತರ ಸದಸ್ಯ) ಅವರನ್ನು ಅಮಾನತುಗೊಳಿಸಲಾಗಿದೆ.</p>.<p>‘ಈ ನಡೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್ ಪೊನಿಯಾ ಅವರು, ನಾವು ನ್ಯಾಯಕ್ಕಾಗಿ ಹೋರಾಡುತ್ತೇವೆ. ಮೇಯರ್ ಮತ್ತು ಸದಸ್ಯರನ್ನು ಅಮಾನತುಗೊಳಿಸಿರುವುದು ದುರದೃಷ್ಟಕರ. ಇದು ಕಾಂಗ್ರೆಸ್ ಪತನಕ್ಕೆ ಕಾರಣವಾಗಲಿದೆ’ ಎಂದಿದ್ದಾರೆ.</p>.<p>ಮನೆ ಬಾಗಿಲಿನಿಂದ ಕಸ ಸಂಗ್ರಹಿಸುವ ಕಂಪನಿಯ ಕುರಿತಾಗಿ ಚರ್ಚಿಸಲು ಶುಕ್ರವಾರ ಮೇಯರ್ ಕೊಠಡಿಯಲ್ಲಿ ಸಭೆ ಆಯೋಜಿಸಲಾಗಿತ್ತು. ಇದರಲ್ಲಿ ಆಯುಕ್ತ ಯಜ್ಞ ಮಿತ್ರ ಸಿಂಗ್ಅವರು ಭಾಗವಹಿಸಿದ್ದರು. ಈ ಸಭೆಯಲ್ಲಿ ಆಯುಕ್ತರು ಮತ್ತು ಮೇಯರ್ ನಡುವೆ ವಾಗ್ವಾದ ನಡೆದಿದೆ.ಈ ಮಧ್ಯೆ ಸದಸ್ಯರು ಆಯುಕ್ತರನ್ನು ನಿಂದಿಸಿದ್ದು ಮಾತ್ರವಲ್ಲದೆ ಅವರ ಮೇಲೆ ಹಲ್ಲೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>ಸ್ಥಳೀಯ ಸಂಸ್ಥೆಯ ಆಯುಕ್ತರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಜೈಪುರ ಗ್ರೇಟರ್ ಮುನ್ಸಿಪಲ್ ಕಾರ್ಪೊರೇಶನ್ನ ಮೇಯರ್ ಮತ್ತು ಮೂವರು ಸದಸ್ಯರನ್ನು ರಾಜಸ್ಥಾನ ಸರ್ಕಾರ ಅಮಾನತುಗೊಳಿಸಿದೆ. ಈ ನಡೆಗೆ ಬಿಜೆಪಿಯಿಂದ ಭಾರಿ ಆಕ್ಷೇಪ ವ್ಯಕ್ತವಾಗಿದೆ.</p>.<p>ಕಾಂಗ್ರೆಸ್ ಸರ್ಕಾರವು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲೂ ನಿರ್ಧರಿಸಿದೆ.</p>.<p>ಸ್ಥಳೀಯ ಆಡಳಿತವು ಈ ಸಂಬಂಧ ಭಾನುವಾರ ರಾತ್ರಿ ಆದೇಶ ಹೊರಡಿಸಿದ್ದು, ಮೇಯರ್ ಸೌಮ್ಯ ಗುರ್ಜಾರ್, ಸದಸ್ಯರಾದ ಅಜಯ್ ಸಿಂಗ್ ಚೌಹಾಣ್, ಪಾರಸ್ ಸಿಂಗ್( ಈ ಮೂವರು ಬಿಜೆಪಿಗೆ ಸೇರಿದವರು) ಮತ್ತು ಶಂಕರ್ ಶರ್ಮಾ(ಪಕ್ಷೇತರ ಸದಸ್ಯ) ಅವರನ್ನು ಅಮಾನತುಗೊಳಿಸಲಾಗಿದೆ.</p>.<p>‘ಈ ನಡೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್ ಪೊನಿಯಾ ಅವರು, ನಾವು ನ್ಯಾಯಕ್ಕಾಗಿ ಹೋರಾಡುತ್ತೇವೆ. ಮೇಯರ್ ಮತ್ತು ಸದಸ್ಯರನ್ನು ಅಮಾನತುಗೊಳಿಸಿರುವುದು ದುರದೃಷ್ಟಕರ. ಇದು ಕಾಂಗ್ರೆಸ್ ಪತನಕ್ಕೆ ಕಾರಣವಾಗಲಿದೆ’ ಎಂದಿದ್ದಾರೆ.</p>.<p>ಮನೆ ಬಾಗಿಲಿನಿಂದ ಕಸ ಸಂಗ್ರಹಿಸುವ ಕಂಪನಿಯ ಕುರಿತಾಗಿ ಚರ್ಚಿಸಲು ಶುಕ್ರವಾರ ಮೇಯರ್ ಕೊಠಡಿಯಲ್ಲಿ ಸಭೆ ಆಯೋಜಿಸಲಾಗಿತ್ತು. ಇದರಲ್ಲಿ ಆಯುಕ್ತ ಯಜ್ಞ ಮಿತ್ರ ಸಿಂಗ್ಅವರು ಭಾಗವಹಿಸಿದ್ದರು. ಈ ಸಭೆಯಲ್ಲಿ ಆಯುಕ್ತರು ಮತ್ತು ಮೇಯರ್ ನಡುವೆ ವಾಗ್ವಾದ ನಡೆದಿದೆ.ಈ ಮಧ್ಯೆ ಸದಸ್ಯರು ಆಯುಕ್ತರನ್ನು ನಿಂದಿಸಿದ್ದು ಮಾತ್ರವಲ್ಲದೆ ಅವರ ಮೇಲೆ ಹಲ್ಲೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>