’ಸರ್ಕಾರವೇ ಇಲ್ಲಿ ಕೆಲವರು ತಪ್ಪು ಮಾಡಲಿ ಎಂದು ಹೊಂಚು ಹಾಕಿ ಕೂತಿದೆ. ಯಾವ ರೀತಿಯ ತಪ್ಪು ಮಾಡಬಹುದು ಎನ್ನುವ ಪರಿಸ್ಥಿತಿಯನ್ನು ಕೂಡ ಸೃಷ್ಟಿಸಿದೆ. ಸಿದ್ದಿಕ್ ಕಪ್ಪನ್, ಉಮರ್ ಖಾಲಿದ್ ಮೊದಲಾದವರು ಅದಕ್ಕೆ ಉದಾಹರಣೆ. ಬೆಂಗಳೂರಿನಲ್ಲಿ ಅಮೂಲ್ಯಾ ಎಂಬ ಹೆಣ್ಣುಮಗಳು ಎರಡು ದೇಶಗಳ ಪರವಾಗಿ ಘೋಷಣೆ ಕೂಗಿದ್ದೇ, ನೂರು ದಿನ ಅವಳನ್ನು ಜೈಲಿನಲ್ಲಿ ಇರಿಸಿದರು. ಆರೋಪಪಟ್ಟಿಯನ್ನೂ ದಾಖಲಿಸಲಿಲ್ಲ. ಆಮೇಲೆ ಸುಮ್ಮನೆ ಬಿಟ್ಟು ಕಳಿಸಿದರು. ತಮಗೂ ಅವಳ ವರ್ತನೆಗೂ ಸಂಬಂಧವಿಲ್ಲ ಎಂದು ಅವರ ತಂದೆಯೇ ಹೇಳಿದ ದೇಶವಿದು’ ಎಂದು ಅವರು ವ್ಯಂಗ್ಯವಾಡಿದರು.