ತಮಿಳುನಾಡಿನ ಜನಪ್ರಿಯವಾದ ದೇಸಿ ಕ್ರೀಡೆ ಜಲ್ಲಿಕಟ್ಟನ್ನು ಹಿಂಸೆಯ ಕಾರಣದಿಂದ ಸುಪ್ರೀಂಕೋರ್ಟ್ ಕೆಲಕಾಲ ನಿಷೇಧಿಸಿತ್ತು. ತಮಿಳುನಾಡು ಸರ್ಕಾರ ಕಾನೂನು ಸಮರ ಮತ್ತು ಪ್ರತಿಭಟನೆಗಳ ಬಳಿಕ ಕ್ರೀಡೆಯನ್ನು ಉಳಿಸಿಕೊಂಡಿದ್ದು, ಪ್ರತಿ ವರ್ಷ ಸಂಭ್ರಮದಿಂದ ಕ್ರೀಡೆಯನ್ನು ನಡೆಸಲಾಗುತ್ತಿದೆ. ತಮಿಳುನಾಡು ಸರ್ಕಾರ ಸುರಕ್ಷತೆ ದೃಷ್ಟಿಯಿಂದ ಇತ್ತೀಚೆಗೆ ಜಲ್ಲಿಕಟ್ಟು ಕಾರ್ಯಕ್ರಮಗಳಿಗೆ ವಿಸ್ತಾರವಾದ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.