<p><strong>ಜಲಪಾಯ್ಗುಡಿ:</strong> ಪಶ್ಚಿಮ ಬಂಗಾಳದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ.</p>.<p>ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಾದ ಕಾರಣ ಅಪಘಾತ ಸಂಭವಿಸಿದೆ.</p>.<p>ಈ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಪರಿಹಾರ ನಿಧಿಯನ್ನು ಘೋಷಣೆ ಮಾಡಿದ್ದಾರೆ. ಹಾಗೆಯೇ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಸಹಾಯಧನ ಘೋಷಣೆ ಮಾಡಲಾಗಿದೆ.</p>.<p>ಪಶ್ಚಿಮ ಬಂಗಾಳದ ಜಲಪಾಯ್ಗುಡಿ ಜಿಲ್ಲೆಯ ಧೂಪ್ಗುರಿ ನಗರದಲ್ಲಿ ಅವಘಡ ಸಂಭವಿಸಿದೆ. ವಾಹನವೊಂದು ನಿಯಂತ್ರಣ ಕಳೆದುಕೊಂಡು ಟ್ರಕ್ಗೆ ಮುಖಾಮುಖಿ ಢಿಕ್ಕಿ ಹೊಡೆದು ವಿಭಜಕದ ಬಲ ಬದಿಗೆ ಸರಿದಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/three-infiltrators-killed-four-jawans-injured-along-loc-in-jammu-and-kashmir-798001.html" itemprop="url">ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳಲು ಪ್ರಯತ್ನಿಸುತ್ತಿದ್ದ ಮೂವರು ಉಗ್ರರ ಹತ್ಯೆ </a></p>.<p>ಈ ಸಂದರ್ಭದಲ್ಲಿ ಎದುರಿನಿಂದ ಬಂದ ಎರಡು ವಾಹನಗಳು ಬಂಡೆಕಲ್ಲುಹೊತ್ತಿದ್ದಟ್ರಕ್ಗೆ ಡಿಕ್ಕಿ ಹೊಡೆದ ಸಂದರ್ಭ ಟ್ರಕ್ ವಾಹನದ ಮೇಲೆ ಮಗುಚಿದೆ. ಎಲ್ಲ ನಾಲ್ಕು ವಾಹನಗಳು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ, ಪಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಧನ ಸಹಾಯ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಲಪಾಯ್ಗುಡಿ:</strong> ಪಶ್ಚಿಮ ಬಂಗಾಳದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ.</p>.<p>ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಾದ ಕಾರಣ ಅಪಘಾತ ಸಂಭವಿಸಿದೆ.</p>.<p>ಈ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಪರಿಹಾರ ನಿಧಿಯನ್ನು ಘೋಷಣೆ ಮಾಡಿದ್ದಾರೆ. ಹಾಗೆಯೇ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಸಹಾಯಧನ ಘೋಷಣೆ ಮಾಡಲಾಗಿದೆ.</p>.<p>ಪಶ್ಚಿಮ ಬಂಗಾಳದ ಜಲಪಾಯ್ಗುಡಿ ಜಿಲ್ಲೆಯ ಧೂಪ್ಗುರಿ ನಗರದಲ್ಲಿ ಅವಘಡ ಸಂಭವಿಸಿದೆ. ವಾಹನವೊಂದು ನಿಯಂತ್ರಣ ಕಳೆದುಕೊಂಡು ಟ್ರಕ್ಗೆ ಮುಖಾಮುಖಿ ಢಿಕ್ಕಿ ಹೊಡೆದು ವಿಭಜಕದ ಬಲ ಬದಿಗೆ ಸರಿದಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/three-infiltrators-killed-four-jawans-injured-along-loc-in-jammu-and-kashmir-798001.html" itemprop="url">ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳಲು ಪ್ರಯತ್ನಿಸುತ್ತಿದ್ದ ಮೂವರು ಉಗ್ರರ ಹತ್ಯೆ </a></p>.<p>ಈ ಸಂದರ್ಭದಲ್ಲಿ ಎದುರಿನಿಂದ ಬಂದ ಎರಡು ವಾಹನಗಳು ಬಂಡೆಕಲ್ಲುಹೊತ್ತಿದ್ದಟ್ರಕ್ಗೆ ಡಿಕ್ಕಿ ಹೊಡೆದ ಸಂದರ್ಭ ಟ್ರಕ್ ವಾಹನದ ಮೇಲೆ ಮಗುಚಿದೆ. ಎಲ್ಲ ನಾಲ್ಕು ವಾಹನಗಳು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ, ಪಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಧನ ಸಹಾಯ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>