<p><strong>ನವದೆಹಲಿ (ಪಿಟಿಐ)</strong>: ಯುವತಿಯರು ಮಸೀದಿ ಪ್ರವೇಶಿಸುವುದನ್ನು ನಿರ್ಬಂಧಿಸಿದ್ದ ಜಾಮಾ ಮಸೀದಿ ಆಡಳಿತವು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಮನವಿಯ ಬಳಿಕ ತನ್ನ ಆದೇಶ ಹಿಂಪಡೆದಿದೆ.</p>.<p>‘ಲೆಫ್ಟಿನೆಂಟ್ ಗವರ್ನರ್ ಅವರು ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಆದೇಶ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ನಮ್ಮ ನಿರ್ಧಾರ ಬದಲಿಸಿದ್ದೇವೆ. ಮಸೀದಿಗೆ ಭೇಟಿ ನೀಡುವವರು ಪಾವಿತ್ರ್ಯತೆ ಕಾಪಾಡಬೇಕು’ ಎಂದು ಮಸೀದಿಯ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಗುರುವಾರ ಹೇಳಿದ್ದಾರೆ.</p>.<p>ಯುವತಿ ಅಥವಾ ಯುವತಿಯರ ಗುಂಪು ಮಸೀದಿ ಪ್ರವೇಶಿಸುವುದನ್ನು ನಿಷೇಧಿಸಿರುವುದಾಗಿ ಮಸೀದಿಯ ಮುಖ್ಯದ್ವಾರಗಳ ಮೇಲೆ ಸೂಚನಾ ಫಲಕ ಹಾಕಲಾಗಿತ್ತು. ಮಸೀದಿ ಆಡಳಿತದ ಈ ನಿರ್ಧಾರಕ್ಕೆ ಭಾರಿ ಟೀಕೆ ವ್ಯಕ್ತವಾಗಿತ್ತು.</p>.<p>ವಿವಾದದ ಬೆನ್ನಲ್ಲೇ ಈ ಕುರಿತು ಸ್ಪಷ್ಟನೆ ನೀಡಿದ್ದ ಬುಖಾರಿ, ‘ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಬರುವವರಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ. ಮಸೀದಿಯ ಆವರಣದಲ್ಲಿ ಯುವತಿಯರು ರೀಲ್ಸ್, ಟಿಕ್ಟಾಕ್ ವಿಡಿಯೊ ಮಾಡುತ್ತಿದ್ದ ಕುರಿತು ವರದಿಗಳಾಗಿತ್ತು. ಹೀಗಾಗಿ ಈ ನಿರ್ಧಾರ ತೆಗದುಕೊಳ್ಳಲಾಗಿದೆ. ಮಸೀದಿಯು ಪ್ರಾರ್ಥನಾ ಸ್ಥಳ. ಅದಕ್ಕಾಗಿ ಬರುವವರಿಗೆ ಯಾವ ನಿರ್ಬಂಧವೂ ಇಲ್ಲ. ಆದರೆ ತಮ್ಮ ಸಂಗಾತಿಯ ಭೇಟಿಗಾಗಿ ಬಂದು ಕಾಯುವವರಿಗೆ ಪ್ರವೇಶವಿಲ್ಲ’ ಎಂದು ಹೇಳಿದ್ದರು.</p>.<p>ಮಸೀದಿಯ ನಿರ್ಧಾರ ವಿರೋಧಿಸಿದ್ದ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಾಲಿವಾಲ್, ಈ ಕ್ರಮ ಮಹಿಳೆಯರ ಹಕ್ಕುಗಳನ್ನು ಉಲ್ಲಂಘಿಸಲಿದೆ’ ಎಂದಿದ್ದರು. ಈ ಸಂಬಂಧ ಮಸೀದಿ ಆಡಳಿತಕ್ಕೆ ನೋಟಿಸ್ ನೀಡಿರುವುದಾಗಿ ತಿಳಿಸಿದ್ದರು.</p>.<p>ಅಸಾಂವಿಧಾನಿಕ ನಡೆ: ಮಸೀದಿ ಆಡಳಿತದ ನಡೆಯನ್ನು ಮಹಿಳಾ ವಿರೋಧಿ ಮತ್ತು ಅಸಾಂವಿಧಾನಿಕ ಎಂದು ಟೀಕಿಸಿದ್ದ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ), ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ಆಗ್ರಹಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ)</strong>: ಯುವತಿಯರು ಮಸೀದಿ ಪ್ರವೇಶಿಸುವುದನ್ನು ನಿರ್ಬಂಧಿಸಿದ್ದ ಜಾಮಾ ಮಸೀದಿ ಆಡಳಿತವು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಮನವಿಯ ಬಳಿಕ ತನ್ನ ಆದೇಶ ಹಿಂಪಡೆದಿದೆ.</p>.<p>‘ಲೆಫ್ಟಿನೆಂಟ್ ಗವರ್ನರ್ ಅವರು ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಆದೇಶ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ನಮ್ಮ ನಿರ್ಧಾರ ಬದಲಿಸಿದ್ದೇವೆ. ಮಸೀದಿಗೆ ಭೇಟಿ ನೀಡುವವರು ಪಾವಿತ್ರ್ಯತೆ ಕಾಪಾಡಬೇಕು’ ಎಂದು ಮಸೀದಿಯ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಗುರುವಾರ ಹೇಳಿದ್ದಾರೆ.</p>.<p>ಯುವತಿ ಅಥವಾ ಯುವತಿಯರ ಗುಂಪು ಮಸೀದಿ ಪ್ರವೇಶಿಸುವುದನ್ನು ನಿಷೇಧಿಸಿರುವುದಾಗಿ ಮಸೀದಿಯ ಮುಖ್ಯದ್ವಾರಗಳ ಮೇಲೆ ಸೂಚನಾ ಫಲಕ ಹಾಕಲಾಗಿತ್ತು. ಮಸೀದಿ ಆಡಳಿತದ ಈ ನಿರ್ಧಾರಕ್ಕೆ ಭಾರಿ ಟೀಕೆ ವ್ಯಕ್ತವಾಗಿತ್ತು.</p>.<p>ವಿವಾದದ ಬೆನ್ನಲ್ಲೇ ಈ ಕುರಿತು ಸ್ಪಷ್ಟನೆ ನೀಡಿದ್ದ ಬುಖಾರಿ, ‘ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಬರುವವರಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ. ಮಸೀದಿಯ ಆವರಣದಲ್ಲಿ ಯುವತಿಯರು ರೀಲ್ಸ್, ಟಿಕ್ಟಾಕ್ ವಿಡಿಯೊ ಮಾಡುತ್ತಿದ್ದ ಕುರಿತು ವರದಿಗಳಾಗಿತ್ತು. ಹೀಗಾಗಿ ಈ ನಿರ್ಧಾರ ತೆಗದುಕೊಳ್ಳಲಾಗಿದೆ. ಮಸೀದಿಯು ಪ್ರಾರ್ಥನಾ ಸ್ಥಳ. ಅದಕ್ಕಾಗಿ ಬರುವವರಿಗೆ ಯಾವ ನಿರ್ಬಂಧವೂ ಇಲ್ಲ. ಆದರೆ ತಮ್ಮ ಸಂಗಾತಿಯ ಭೇಟಿಗಾಗಿ ಬಂದು ಕಾಯುವವರಿಗೆ ಪ್ರವೇಶವಿಲ್ಲ’ ಎಂದು ಹೇಳಿದ್ದರು.</p>.<p>ಮಸೀದಿಯ ನಿರ್ಧಾರ ವಿರೋಧಿಸಿದ್ದ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಾಲಿವಾಲ್, ಈ ಕ್ರಮ ಮಹಿಳೆಯರ ಹಕ್ಕುಗಳನ್ನು ಉಲ್ಲಂಘಿಸಲಿದೆ’ ಎಂದಿದ್ದರು. ಈ ಸಂಬಂಧ ಮಸೀದಿ ಆಡಳಿತಕ್ಕೆ ನೋಟಿಸ್ ನೀಡಿರುವುದಾಗಿ ತಿಳಿಸಿದ್ದರು.</p>.<p>ಅಸಾಂವಿಧಾನಿಕ ನಡೆ: ಮಸೀದಿ ಆಡಳಿತದ ನಡೆಯನ್ನು ಮಹಿಳಾ ವಿರೋಧಿ ಮತ್ತು ಅಸಾಂವಿಧಾನಿಕ ಎಂದು ಟೀಕಿಸಿದ್ದ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ), ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ಆಗ್ರಹಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>