ಶ್ರೀನಗರ: ಗಡಿ ನಿಯಂತ್ರಣ ರೇಖೆಯಲ್ಲಿ ಗಸ್ತು ತಿರುಗುತ್ತಿದ್ದ ಮೂವರು ಸೈನಿಕರು ಆಳವಾದ ಕಮರಿಗೆ ಜಾರಿಬಿದ್ದು ದುರ್ಮರಣಕ್ಕೀಡಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಿಂದ ಬುಧವಾರ ವರದಿಯಾಗಿದೆ.
ಮಚ್ಚಿಲ್ ಸೆಕ್ಟರ್ನಲ್ಲಿ ಘಟನೆ ನಡೆದಿದೆ. ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಮೂವರು ಸೈನಿಕರು ದೈನಂದಿನ ಗಸ್ತು ತಿರುಗುತ್ತಿದ್ದಾಗ ಹಿಮಪಾತಕ್ಕೆ ಸಿಲುಕಿ ಕಮರಿಗೆ ಜಾರಿ ಬಿದ್ದಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಲ್ಲ ಮೂವರು ಯೋಧರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಚಿನಾರ್ ಕಾರ್ಪ್ಸ್ ತಿಳಿಸಿದೆ.