<p><strong>ಶ್ರೀನಗರ</strong>: ಜಮ್ಮು–ಕಾಶ್ಮೀರ ಮೂಲಕ ಪ್ರಮುಖ ವಕೀಲ ಬಾಬರ್ ಕಾದರಿ ಅವರನ್ನು ಉಗ್ರಗಾಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಶ್ರೀನಗರದ ಹವಾಲ ಪ್ರದೇಶದಲ್ಲಿ ಗುರುವಾರ ಸಂಜೆ ಹತ್ಯೆ ನಡೆದಿದೆ.</p>.<p>ಬಾಬರ್ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಧ್ಯೆಯಲ್ಲೇ ಅವರು ಸಾವಿಗೀಡಾದರು ಎಂದು ಜಮ್ಮು ಮತ್ತು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.</p>.<p>ಪ್ರಾಥಮಿಕ ಮಾಹಿತಿಗಳ ಪ್ರಕಾರ, ಗುರುತು ಪತ್ತೆ ಮಾಡಲಾಗದ ಬಂದೂಕುಧಾರಿ ಬಾಬರ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಎಸ್ಕೆಐಎಂಎಸ್ ಆಸ್ಪತ್ರೆಗೆ ಅವರನ್ನು ಸಾಗಿಸಲಾಯಿತು, ಆದರೆ ಅವರು ಸಾವಿಗೀಡಾಗಿರುವುದಾಗಿ ವೈದ್ಯರು ಘೋಷಿಸಿದರು.</p>.<p>'ಷಾಹ್ ನಾಜಿರ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ರಾಜ್ಯದ ಪೊಲೀಸ್ ಆಡಳಿತದಲ್ಲಿ ಕೋರುತ್ತೇನೆ. ನಾನು ಏಜೆನ್ಸಿಗಳಿಗಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಈತ ತಪ್ಪು ಮಾಹಿತಿಗಳನ್ನು ಹರಡುತ್ತಿದ್ದಾನೆ. ಈ ಅಸತ್ಯದ ಹೇಳಿಕೆಗಳು ನನ್ನ ಬದುಕಿಗೆ ಅಪಾಯ ಉಂಟು ಮಾಡಬಹುದಾಗಿದೆ' ಎಂದು ಇತ್ತೀಚೆಗಷ್ಟೇ ಬಾಬರ್ ಟ್ವೀಟ್ವೊಂದನ್ನು ಉದ್ದೇಶಿಸಿ ಪ್ರಕಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು–ಕಾಶ್ಮೀರ ಮೂಲಕ ಪ್ರಮುಖ ವಕೀಲ ಬಾಬರ್ ಕಾದರಿ ಅವರನ್ನು ಉಗ್ರಗಾಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಶ್ರೀನಗರದ ಹವಾಲ ಪ್ರದೇಶದಲ್ಲಿ ಗುರುವಾರ ಸಂಜೆ ಹತ್ಯೆ ನಡೆದಿದೆ.</p>.<p>ಬಾಬರ್ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಧ್ಯೆಯಲ್ಲೇ ಅವರು ಸಾವಿಗೀಡಾದರು ಎಂದು ಜಮ್ಮು ಮತ್ತು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.</p>.<p>ಪ್ರಾಥಮಿಕ ಮಾಹಿತಿಗಳ ಪ್ರಕಾರ, ಗುರುತು ಪತ್ತೆ ಮಾಡಲಾಗದ ಬಂದೂಕುಧಾರಿ ಬಾಬರ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಎಸ್ಕೆಐಎಂಎಸ್ ಆಸ್ಪತ್ರೆಗೆ ಅವರನ್ನು ಸಾಗಿಸಲಾಯಿತು, ಆದರೆ ಅವರು ಸಾವಿಗೀಡಾಗಿರುವುದಾಗಿ ವೈದ್ಯರು ಘೋಷಿಸಿದರು.</p>.<p>'ಷಾಹ್ ನಾಜಿರ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ರಾಜ್ಯದ ಪೊಲೀಸ್ ಆಡಳಿತದಲ್ಲಿ ಕೋರುತ್ತೇನೆ. ನಾನು ಏಜೆನ್ಸಿಗಳಿಗಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಈತ ತಪ್ಪು ಮಾಹಿತಿಗಳನ್ನು ಹರಡುತ್ತಿದ್ದಾನೆ. ಈ ಅಸತ್ಯದ ಹೇಳಿಕೆಗಳು ನನ್ನ ಬದುಕಿಗೆ ಅಪಾಯ ಉಂಟು ಮಾಡಬಹುದಾಗಿದೆ' ಎಂದು ಇತ್ತೀಚೆಗಷ್ಟೇ ಬಾಬರ್ ಟ್ವೀಟ್ವೊಂದನ್ನು ಉದ್ದೇಶಿಸಿ ಪ್ರಕಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>