ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದ್ದು, ಓರ್ವ ಶರಣಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಲ್ಗಾಂ ಜಿಲ್ಲೆಯ ಚಿಮ್ಮರ್ ಗ್ರಾಮದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿತ್ತು.
ಜಮ್ಮು ವಿಮಾನ ನಿಲ್ದಾಣದಲ್ಲಿನ ವಾಯುಪಡೆ ನೆಲೆಯ ಮೇಲೆ ಬಾಂಬ್ ದಾಳಿ ನಡೆದ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಇದೇ ಮೊದಲ ಬಾರಿಗೆ ಭಯೋತ್ಪಾದನಾ ದಾಳಿ ನಡೆಸಲು ಡ್ರೋನ್ ಬಳಸಿತ್ತು. ಈ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ನಡೆಸುತ್ತಿವೆ.
ಇತ್ತೀಚೆಗೆ ಜಮ್ಮು-ಕಾಶ್ಮೀರದ ಸರ್ವ ರಾಜಕೀಯ ಪಕ್ಷಗಳ ಸಭೆಯಲ್ಲಿ ರಾಜ್ಯದ ಸ್ಥಾನಮಾನವನ್ನು ಮರಳಿ ನೀಡುತ್ತೇವೆ ಎಂದು ಸಂಸತ್ತಿನಲ್ಲಿ ನೀಡಿದ ಭರವಸೆಯನ್ನು ಪಾಲಿಸಲು ಬದ್ಧರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು.