<p><strong>ಜಮ್ಮು:</strong> ಹೊಸ ಬಂಡವಾಳ ಹೂಡಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಮ್ಮು ಮತ್ತು ಕಾಶ್ಮೀರ ಆಡಳಿತವು ₹28,400 ಕೋಟಿ ಮೌಲ್ಯದ ನೂತನ ಕೈಗಾರಿಕಾ ಅಭಿವೃದ್ಧಿ ಯೋಜನೆಯನ್ನು(ಐಡಿಎಸ್) ಗುರುವಾರ ಘೋಷಿಸಿದೆ.</p>.<p>‘ಭವಿಷ್ಯವನ್ನು ಗಮನದಲ್ಲಿ ಇರಿಸಿಕೊಂಡು ತೆಗೆದುಕೊಳ್ಳಲಾದ ಪ್ರಮುಖ ನಿರ್ಧಾರ ಇದಾಗಿದ್ದು, ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ನೂತನ ಐಡಿಎಸ್ಗೆ ಒಪ್ಪಿಗೆ ನೀಡಿದೆ. ಈ ಪ್ರದೇಶದ ಸಾಮಾಜಿಕ–ಆರ್ಥಿಕ ಅಭಿವೃದ್ಧಿಯ ಆಗಮನದ ಕಾಲವನ್ನು ಈ ಯೋಜನೆಯು ಸೂಚಿಸುತ್ತದೆ. ಈ ಯೋಜನೆಯು ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 2037ರವರೆಗೆ ಇರಲಿದ್ದು, ಇದರ ಒಟ್ಟಾರೆ ವೆಚ್ಚ ₹28,400 ಕೋಟಿ’ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದರು.</p>.<p>‘ಬ್ಲಾಕ್ ಮಟ್ಟಕ್ಕೂ ಅಭಿವೃದ್ಧಿಯನ್ನು ಹೊತ್ತೊಯ್ಯುತ್ತಿರುವ ಮೊದಲ ಕೈಗಾರಿಕಾ ಪ್ರೋತ್ಸಾಹ ಯೋಜನೆ ಇದಾಗಿದೆ. ಈ ಯೋಜನೆಯು ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲಿದ್ದು, ಪ್ರಸ್ತುತ ಇರುವ ಕೈಗಾರಿಕೆಗಳಿಗೂ ಪ್ರೋತ್ಸಾಹ ನೀಡಲಿದೆ. 4.5 ಲಕ್ಷ ಜನರಿಗೆ ಈ ಯೋಜನೆಯು ಉದ್ಯೋಗ ಸೃಷ್ಟಿಸಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಹೊಸ ಬಂಡವಾಳ ಹೂಡಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಮ್ಮು ಮತ್ತು ಕಾಶ್ಮೀರ ಆಡಳಿತವು ₹28,400 ಕೋಟಿ ಮೌಲ್ಯದ ನೂತನ ಕೈಗಾರಿಕಾ ಅಭಿವೃದ್ಧಿ ಯೋಜನೆಯನ್ನು(ಐಡಿಎಸ್) ಗುರುವಾರ ಘೋಷಿಸಿದೆ.</p>.<p>‘ಭವಿಷ್ಯವನ್ನು ಗಮನದಲ್ಲಿ ಇರಿಸಿಕೊಂಡು ತೆಗೆದುಕೊಳ್ಳಲಾದ ಪ್ರಮುಖ ನಿರ್ಧಾರ ಇದಾಗಿದ್ದು, ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ನೂತನ ಐಡಿಎಸ್ಗೆ ಒಪ್ಪಿಗೆ ನೀಡಿದೆ. ಈ ಪ್ರದೇಶದ ಸಾಮಾಜಿಕ–ಆರ್ಥಿಕ ಅಭಿವೃದ್ಧಿಯ ಆಗಮನದ ಕಾಲವನ್ನು ಈ ಯೋಜನೆಯು ಸೂಚಿಸುತ್ತದೆ. ಈ ಯೋಜನೆಯು ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 2037ರವರೆಗೆ ಇರಲಿದ್ದು, ಇದರ ಒಟ್ಟಾರೆ ವೆಚ್ಚ ₹28,400 ಕೋಟಿ’ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದರು.</p>.<p>‘ಬ್ಲಾಕ್ ಮಟ್ಟಕ್ಕೂ ಅಭಿವೃದ್ಧಿಯನ್ನು ಹೊತ್ತೊಯ್ಯುತ್ತಿರುವ ಮೊದಲ ಕೈಗಾರಿಕಾ ಪ್ರೋತ್ಸಾಹ ಯೋಜನೆ ಇದಾಗಿದೆ. ಈ ಯೋಜನೆಯು ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲಿದ್ದು, ಪ್ರಸ್ತುತ ಇರುವ ಕೈಗಾರಿಕೆಗಳಿಗೂ ಪ್ರೋತ್ಸಾಹ ನೀಡಲಿದೆ. 4.5 ಲಕ್ಷ ಜನರಿಗೆ ಈ ಯೋಜನೆಯು ಉದ್ಯೋಗ ಸೃಷ್ಟಿಸಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>