<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರಗಳ ಪುನರ್ ವಿಂಗಡಣಾ ಆಯೋಗವನ್ನು ಭೇಟಿ ಮಾಡದಿರಲು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ನಿರ್ಧರಿಸಿದೆ.</p>.<p>ಈ ಬಗ್ಗೆ ಪಿಡಿಪಿಯು ಕ್ಷೇತ್ರ ವಿಂಗಡಣಾ ಆಯೋಗದ ಮುಖ್ಯಸ್ಥರಾದ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರಿಗೆ ಪತ್ರ ಬರೆದಿದೆ.</p>.<p>‘ಆಯೋಗದಿಂದ ದೂರ ಉಳಿಯಲು ನಿರ್ಧರಿಸಿದ್ದೇವೆ. ಮೊದಲೇ ನಿರ್ಧಾರವಾಗಿರುವಂತಹ ಫಲಿತಾಂಶ ನೀಡುವ ಪ್ರಕ್ರಿಯೆಯ ಭಾಗವಾಗಲು ಪಕ್ಷ ಇಚ್ಛಿಸುವುದಿಲ್ಲ. ಇದರಿಂದ ಜಮ್ಮು–ಕಾಶ್ಮೀರದ ಜನರ ಹಿತಾಸಕ್ತಿಗೆ ಮತ್ತಷ್ಟು ತೊಂದರೆ ಉಂಟಾಗಬಹುದು’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಲೋನ್ ಹಂಜುರಾ ಅವರು ಪತ್ರದಲ್ಲಿ ಹೇಳಿದ್ದಾರೆ.</p>.<p>‘ಸಂವಿಧಾನದ 370ನೇ ವಿಧಿಯನ್ನು ‘ಕಾನೂನುಬಾಹಿರ ಮತ್ತು ಅಸಾಂವಿಧಾನಿಕವಾಗಿ’ ರದ್ದುಗೊಳಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ’ ಎಂದು ಪತ್ರದಲ್ಲಿ ದೂರಲಾಗಿದೆ.</p>.<p>ಮೂವರು ಸದಸ್ಯರನ್ನೊಳಗೊಂಡ ಕ್ಷೇತ್ರ ವಿಂಗಡಣಾ ಆಯೋಗವು ಮಂಗಳವಾರದಿಂದ ಕೇಂದ್ರಾಡಳಿತ ಪ್ರದೇಶದ ರಾಜಕೀಯ ನಾಯಕರನ್ನು ಭೇಟಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರಗಳ ಪುನರ್ ವಿಂಗಡಣಾ ಆಯೋಗವನ್ನು ಭೇಟಿ ಮಾಡದಿರಲು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ನಿರ್ಧರಿಸಿದೆ.</p>.<p>ಈ ಬಗ್ಗೆ ಪಿಡಿಪಿಯು ಕ್ಷೇತ್ರ ವಿಂಗಡಣಾ ಆಯೋಗದ ಮುಖ್ಯಸ್ಥರಾದ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರಿಗೆ ಪತ್ರ ಬರೆದಿದೆ.</p>.<p>‘ಆಯೋಗದಿಂದ ದೂರ ಉಳಿಯಲು ನಿರ್ಧರಿಸಿದ್ದೇವೆ. ಮೊದಲೇ ನಿರ್ಧಾರವಾಗಿರುವಂತಹ ಫಲಿತಾಂಶ ನೀಡುವ ಪ್ರಕ್ರಿಯೆಯ ಭಾಗವಾಗಲು ಪಕ್ಷ ಇಚ್ಛಿಸುವುದಿಲ್ಲ. ಇದರಿಂದ ಜಮ್ಮು–ಕಾಶ್ಮೀರದ ಜನರ ಹಿತಾಸಕ್ತಿಗೆ ಮತ್ತಷ್ಟು ತೊಂದರೆ ಉಂಟಾಗಬಹುದು’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಲೋನ್ ಹಂಜುರಾ ಅವರು ಪತ್ರದಲ್ಲಿ ಹೇಳಿದ್ದಾರೆ.</p>.<p>‘ಸಂವಿಧಾನದ 370ನೇ ವಿಧಿಯನ್ನು ‘ಕಾನೂನುಬಾಹಿರ ಮತ್ತು ಅಸಾಂವಿಧಾನಿಕವಾಗಿ’ ರದ್ದುಗೊಳಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ’ ಎಂದು ಪತ್ರದಲ್ಲಿ ದೂರಲಾಗಿದೆ.</p>.<p>ಮೂವರು ಸದಸ್ಯರನ್ನೊಳಗೊಂಡ ಕ್ಷೇತ್ರ ವಿಂಗಡಣಾ ಆಯೋಗವು ಮಂಗಳವಾರದಿಂದ ಕೇಂದ್ರಾಡಳಿತ ಪ್ರದೇಶದ ರಾಜಕೀಯ ನಾಯಕರನ್ನು ಭೇಟಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>