ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದ ಜನತೆಗೆ ಪ್ರೀತಿ ಬೇಕಿದೆ- ಸಿಕ್ಕಿದ್ದೇನು? ಬಿಜೆಪಿಯ ಬುಲ್ಡೋಜರ್: ರಾಹುಲ್

Last Updated 12 ಫೆಬ್ರುವರಿ 2023, 10:04 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜನತೆಗೆ ಪ್ರೀತಿ ಬೇಕಿದೆ. ಆದರೆ ದೊರಕಿದ್ದೇನು? ಬಿಜೆಪಿಯ ಬುಲ್ಡೋಜರ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಜನರಲ್ಲಿ ಭೀತಿ ಸೃಷ್ಟಿಸಿದೆ ಎಂಬ ಮಾಧ್ಯಮ ವರದಿಯನ್ನು ರಾಹುಲ್ ಗಾಂಧಿ ಹಂಚಿದ್ದಾರೆ.

ಆಡಳಿತದ ಕ್ರಮವನ್ನು ಕಾಂಗ್ರೆಸ್ ಜತೆಗೆ ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಪಕ್ಷ ತೀವ್ರ ಕಳವಳ ವ್ಯಕ್ತಪಡಿಸಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿ ಬೇಕಿದೆ. ಆದರೆ ಅವರಿಗೆ ಸಿಕ್ಕಿದ್ದೇನು? ಬಿಜೆಪಿಯ ಬುಲ್ಡೋಜರ್! ಹಲವು ದಶಕಗಳಿಂದ ಜನರು ಶ್ರಮದಿಂದ ಬೆಳೆಸಿದ ನಾಡನ್ನು ಅವರಿಂದ ಕಿತ್ತುಕೊಳ್ಳಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಜನರನ್ನು ವಿಭಜಿಸುವ ಮೂಲಕ ಅಲ್ಲ, ಜನರನ್ನು ಒಗ್ಗೂಡಿಸುವ ಮೂಲಕ ಕಾಶ್ಮೀರವನ್ನು ರಕ್ಷಿಸಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT