ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸೋಮವಾರ ಶ್ರೀನಗರದ ಶೇರ್-ಇ-ಕಾಶ್ಮೀರ ಅಂತರರಾರಾಷ್ಟ್ರೀಯ ಕನ್ವೆನ್ಷನ್ ಕೇಂದ್ರದಲ್ಲಿ (ಎಸ್ಕೆಐಸಿಸಿ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ ಭಾಷಣಕ್ಕೂ ಮುನ್ನ, ಗುಂಡುನಿರೋಧಕ (ಬುಲೆಟ್ ಪ್ರೂಫ್) ಗಾಜಿನ ಕವಚವನ್ನು ತೆಗೆದುಹಾಕಿದರು.