<p><strong>ಶ್ರೀನಗರ</strong>: ಜುಲೈ 21 ರಂದು ಆಚರಿಸಲಾಗುವ ಬಕ್ರೀದ್ ಸಂದರ್ಭದಲ್ಲಿ ಜಮ್ಮು- ಕಾಶ್ಮೀರದಾದ್ಯಂತ ಹಸು, ಕರು ಹಾಗೂ ಒಂಟೆಗಳ ಹತ್ಯೆಯನ್ನು ನಿಷೇಧಿಸಿ ಅಲ್ಲಿನ ಆಡಳಿತ ಆದೇಶ ಹೊರಡಿಸಿದೆ.</p>.<p>ಜಮ್ಮು- ಕಾಶ್ಮೀರದ ಪ್ರಾಣಿ ಸಾಕಾಣಿಕೆ ಮತ್ತು ಮೀನುಗಾರಿಕೆ ಇಲಾಖೆಯ ಯೋಜನಾ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದಾರೆ.</p>.<p>ಆಕಳು, ಕರು, ಹೋರಿ, ಎತ್ತು ಹಾಗೂ ಒಂಟೆಗಳ ಹತ್ಯೆ ನಿಷೇಧದ ಬಗೆಗಿನ ಆದೇಶದ ಪ್ರತಿಯನ್ನು ಅಲ್ಲಿನ ವಿಭಾಗೀಯ ಆಯುಕ್ತರು ಮತ್ತು ಐಜಿಪಿಗಳಿಗೆ ರವಾನಿಸಲಾಗಿದೆ.</p>.<p>ಬಕ್ರೀದ್ ವೇಳೆಗೆ ಜಮ್ಮು-ಕಾಶ್ಮೀರದಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಾಣಿ ಹತ್ಯೆಯಾಗುವ ಸಾಧ್ಯತೆ ಇದೆ. ಆ ಹಿನ್ನೆಲೆಯಲ್ಲಿ ಪ್ರಾಣಿ ಕಲ್ಯಾಣ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.</p>.<p>ಅಧಿಕಾರಿಗಳಿಗೆ ರವಾನಿಸಲಾದ ಪ್ರತಿಯಲ್ಲಿ ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಪ್ರಾಣಿ ಕಲ್ಯಾಣ ಮಂಡಳಿಯ ಅಧಿಕೃತ ಪತ್ರದ ಬಗ್ಗೆ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜುಲೈ 21 ರಂದು ಆಚರಿಸಲಾಗುವ ಬಕ್ರೀದ್ ಸಂದರ್ಭದಲ್ಲಿ ಜಮ್ಮು- ಕಾಶ್ಮೀರದಾದ್ಯಂತ ಹಸು, ಕರು ಹಾಗೂ ಒಂಟೆಗಳ ಹತ್ಯೆಯನ್ನು ನಿಷೇಧಿಸಿ ಅಲ್ಲಿನ ಆಡಳಿತ ಆದೇಶ ಹೊರಡಿಸಿದೆ.</p>.<p>ಜಮ್ಮು- ಕಾಶ್ಮೀರದ ಪ್ರಾಣಿ ಸಾಕಾಣಿಕೆ ಮತ್ತು ಮೀನುಗಾರಿಕೆ ಇಲಾಖೆಯ ಯೋಜನಾ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದಾರೆ.</p>.<p>ಆಕಳು, ಕರು, ಹೋರಿ, ಎತ್ತು ಹಾಗೂ ಒಂಟೆಗಳ ಹತ್ಯೆ ನಿಷೇಧದ ಬಗೆಗಿನ ಆದೇಶದ ಪ್ರತಿಯನ್ನು ಅಲ್ಲಿನ ವಿಭಾಗೀಯ ಆಯುಕ್ತರು ಮತ್ತು ಐಜಿಪಿಗಳಿಗೆ ರವಾನಿಸಲಾಗಿದೆ.</p>.<p>ಬಕ್ರೀದ್ ವೇಳೆಗೆ ಜಮ್ಮು-ಕಾಶ್ಮೀರದಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಾಣಿ ಹತ್ಯೆಯಾಗುವ ಸಾಧ್ಯತೆ ಇದೆ. ಆ ಹಿನ್ನೆಲೆಯಲ್ಲಿ ಪ್ರಾಣಿ ಕಲ್ಯಾಣ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.</p>.<p>ಅಧಿಕಾರಿಗಳಿಗೆ ರವಾನಿಸಲಾದ ಪ್ರತಿಯಲ್ಲಿ ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಪ್ರಾಣಿ ಕಲ್ಯಾಣ ಮಂಡಳಿಯ ಅಧಿಕೃತ ಪತ್ರದ ಬಗ್ಗೆ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>