‘ಮೇಘ ಸ್ಫೋಟ ವಿಚಾರವಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಕರ್ನಲ್ ಮತ್ತು ಡಿಜಿಪಿ ಜತೆ ಮಾತುಕತೆ ನಡೆಸಿದ್ದೇನೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಸೇನೆ ಮತ್ತು ಸ್ಥಳೀಯಾಡಳಿತ ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಸಹ ಸ್ಥಳಕ್ಕೆ ತಲುಪಲಿದೆ. ಎಷ್ಟು ಸಾಧ್ಯವೋ ಅಷ್ಟು ಜನರ ಜೀವ ರಕ್ಷಣೆಗೆ ನಮ್ಮ ಮೊದಲ ಆದ್ಯತೆ’ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಮಿತ್ ಶಾ, ಮೃತಪಟ್ಟವರ ಬಗ್ಗೆ ಸಂತಾಪ ಸೂಚಿಸಿದ್ದಾರೆ.