<p>ಜಮ್ಮು ಮತ್ತು ಕಾಶ್ಮೀರದ ಗಡಿಯ ಪೂಂಛ್ ಮತ್ತು ರಾಜೌರಿ ಜಿಲ್ಲೆಗಳ ಅರಣ್ಯ ಭಾಗದಲ್ಲಿ ಸತತ ಏಳನೇ ದಿನವೂ ಶೋಧ ಕಾರ್ಯಾಚರಣೆಯು ಮುಂದುವರಿದಿದೆ. ಭದ್ರತಾ ಸಿಬ್ಬಂದಿಯು ತಾಯಿ–ಮಗ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ತನಿಖೆಗೆ ಒಳಪಡಿಸಿದ್ದಾರೆ.</p>.<p class="bodytext">ಕಳೆದ ಒಂದು ವಾರದಲ್ಲಿ ಒಂದೆರಡು ಬಾರಿ ಈ ಭಾಗದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿತ್ತು. ಒಟ್ಟು ಒಂಭತ್ತು ಯೋಧರು ಹುತಾತ್ಮರಾಗಿದ್ದಾರೆ.</p>.<p>ಭಟ್ಟಾ ದುರಿಯನ್ ಅರಣ್ಯ ಭಾಗದಲ್ಲಿ ವಾಸವಿದ್ದ 45 ವರ್ಷದ ಮಹಿಳೆ, ಆಕೆಯ ಮಗ ಮತ್ತು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಇವರು, ಉಗ್ರರಿಗೆ ಪ್ರಯಾಣ ಸೇರಿದಂತೆ ಇತರೆ ನೆರವು ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇವರು, ಸ್ವಯಂಪ್ರೇರಿತವಾಗಿ ನೆರವು ನೀಡಿದ್ದರೆ ಅಥವಾ ಉಗ್ರರ ಬೆದರಿಕೆಗೆ ಮಣಿದು ನೀಡಿದ್ದರೇ ಎಂಬ ಬಗ್ಗೆ ತನಿಖೆ ನಡೆದಿದೆ. ಉಗ್ರರು ಅಡಗಿದ್ದ ಭಾಗ ಬೆಟ್ಟಗುಡ್ಡಗಳಿಂದ ಆವೃತವಾಗಿದ್ದು, ದಟ್ಟ ಅರಣ್ಯದಿಂದ ಕೂಡಿದೆ. ಇದರಿಂದಾಗಿ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮ್ಮು ಮತ್ತು ಕಾಶ್ಮೀರದ ಗಡಿಯ ಪೂಂಛ್ ಮತ್ತು ರಾಜೌರಿ ಜಿಲ್ಲೆಗಳ ಅರಣ್ಯ ಭಾಗದಲ್ಲಿ ಸತತ ಏಳನೇ ದಿನವೂ ಶೋಧ ಕಾರ್ಯಾಚರಣೆಯು ಮುಂದುವರಿದಿದೆ. ಭದ್ರತಾ ಸಿಬ್ಬಂದಿಯು ತಾಯಿ–ಮಗ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ತನಿಖೆಗೆ ಒಳಪಡಿಸಿದ್ದಾರೆ.</p>.<p class="bodytext">ಕಳೆದ ಒಂದು ವಾರದಲ್ಲಿ ಒಂದೆರಡು ಬಾರಿ ಈ ಭಾಗದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿತ್ತು. ಒಟ್ಟು ಒಂಭತ್ತು ಯೋಧರು ಹುತಾತ್ಮರಾಗಿದ್ದಾರೆ.</p>.<p>ಭಟ್ಟಾ ದುರಿಯನ್ ಅರಣ್ಯ ಭಾಗದಲ್ಲಿ ವಾಸವಿದ್ದ 45 ವರ್ಷದ ಮಹಿಳೆ, ಆಕೆಯ ಮಗ ಮತ್ತು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಇವರು, ಉಗ್ರರಿಗೆ ಪ್ರಯಾಣ ಸೇರಿದಂತೆ ಇತರೆ ನೆರವು ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇವರು, ಸ್ವಯಂಪ್ರೇರಿತವಾಗಿ ನೆರವು ನೀಡಿದ್ದರೆ ಅಥವಾ ಉಗ್ರರ ಬೆದರಿಕೆಗೆ ಮಣಿದು ನೀಡಿದ್ದರೇ ಎಂಬ ಬಗ್ಗೆ ತನಿಖೆ ನಡೆದಿದೆ. ಉಗ್ರರು ಅಡಗಿದ್ದ ಭಾಗ ಬೆಟ್ಟಗುಡ್ಡಗಳಿಂದ ಆವೃತವಾಗಿದ್ದು, ದಟ್ಟ ಅರಣ್ಯದಿಂದ ಕೂಡಿದೆ. ಇದರಿಂದಾಗಿ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>