ಸೋಮವಾರ ಜಿಲ್ಲಾಧಿಕಾರಿಗಳು, ವಿಭಾಗೀಯ ಆಯುಕ್ತರು ಹಾಗೂ ಪೊಲೀಸ್ ಸುಪರಿಂಟೆಂಡೆಂಟ್ಗಳ ಜತೆ ಸಭೆ ನಡೆಸಿದ ಅವರು, ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆಯ ‘ಆಜಾದಿ ಕಾ ಅಮೃತ್ ಮಹೋತ್ಸವ್’ ಕಾರ್ಯಕ್ರಮದ ಅಡಿ ನಡೆಯುತ್ತಿರುವ ಚಟುವಟಿಕೆಗಳ ಪರಾಮರ್ಶೆ ನಡೆಸಿದ್ದಾರೆ. ಇದೇ ವೇಳೆ, ಸರ್ಕಾರಿ ಕಟ್ಟಡ ಮತ್ತು ಸಂಸ್ಥೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಕುರಿತ ಸೂಚನೆಯನ್ನೂ ನೀಡಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.