<p><strong>ಶ್ರೀನಗರ: </strong>ದಕ್ಷಿಣ ಕಾಶ್ಮೀರದಲ್ಲಿ ಶನಿವಾರ 12 ಗಂಟೆಗಳ ಅವಧಿಯಲ್ಲಿ ಭಾರತೀಯ ಸೇನೆ ಹಾಗೂ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್ಕೌಂಟರ್ನಲ್ಲಿ ಸುಧಾರಿತ ಸ್ಫೋಟಕ ಪರಿಣತ ಸೇರಿ ನಾಲ್ವರು ಉಗ್ರರು ಹತ್ಯೆಯಾಗಿದ್ದಾರೆ.</p>.<p>ಪುಲ್ವಾಮ ಜಿಲ್ಲೆಯ ತ್ರಾಲ್ ಸಮೀಪದ ಹರ್ದುಮಿರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದು, ಹತ್ಯೆಯಾದವರನ್ನು ನದೀಂ ಭಟ್ ಹಾಗೂ ರಸೂಲ್ ಅಲಿಯಾಸ್ ಆದಿಲ್ ಎಂದು ಗುರುತಿಸಲಾಗಿದೆ.</p>.<p>‘ಹತ್ಯೆಯಾದ ರಸೂಲ್ ಆದಿಲ್ ಸುಧಾರಿತ ಸ್ಫೋಟಕ ಪರಿಣತನಾಗಿದ್ದು,ಈತ ನಿಷೇಧಿತ ಅನ್ಸರ್ ಗಜ್ವತ್-ಉಲ್-ಹಿಂದ್(ಎಜಿಯುಎಚ್) ಸಂಘಟನೆ ಜತೆ ಗುರುತಿಸಿಕೊಂಡಿದ್ದ. ಹತ್ಯೆಯಾದ ಈ ಇಬ್ಬರು ಗ್ರೆನೆಡ್ ದಾಳಿ ಸೇರಿದಂತೆ ಹಲವು ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿದ್ದರು.ಈ ಉಗ್ರರಿಂದ ಎರಡು ಎಕೆ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಕಾಶ್ಮೀರ ವಲಯ ಐಜಿಪಿ ವಿಜಯಕುಮಾರ್ ತಿಳಿಸಿದರು.</p>.<p>‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು, ಸೇನೆ ಹಾಗೂ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ನಂತರ ಭದ್ರತಾ ಪಡೆಗಳ ಪ್ರತಿದಾಳಿಗೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ’ ಎಂದು ಅವರು ತಿಳಿಸಿದರು.</p>.<p>ಶೋಪಿಯಾನ್ ಜಿಲ್ಲೆಯ ಚೌಗಮ್ ಪ್ರದೇಶದಲ್ಲಿ ಶನಿವಾರ ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಲಷ್ಕರ್–ಎ–ತೈಬಾ (ಎಲ್ಇಟಿ) ಉಗ್ರರು ಹತರಾಗಿದ್ದು, ಹತ್ಯೆಯಾದವರನ್ನು ಸಜಾದ್ ಅಹ್ಮದ್ ಚೆಕ್ ಹಾಗೂ ರಾಜ ಬಸಿತ್ ನಜೀರ್ ಎಂದು ಗುರುತಿಸಲಾಗಿದೆ.</p>.<p>‘ಹತ್ಯೆಯಾದ ಉಗ್ರರ ಪೈಕಿ ಒಬ್ಬ ಗ್ರೆನೆಡ್ ದಾಳಿ ಹಾಗೂ ನಾಗರಿಕರ ಹತ್ಯೆಯಲ್ಲಿ ಪಾಲ್ಗೊಂಡಿದ್ದ. ಮತ್ತೊಬ್ಬ ಇತ್ತೀಚೆಗಷ್ಟೆ ಉಗ್ರ ಸಂಘಟನೆ ಸೇರಿದ್ದ’ ಎಂದು ಐಜಿಪಿ ವಿಜಯಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ದಕ್ಷಿಣ ಕಾಶ್ಮೀರದಲ್ಲಿ ಶನಿವಾರ 12 ಗಂಟೆಗಳ ಅವಧಿಯಲ್ಲಿ ಭಾರತೀಯ ಸೇನೆ ಹಾಗೂ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್ಕೌಂಟರ್ನಲ್ಲಿ ಸುಧಾರಿತ ಸ್ಫೋಟಕ ಪರಿಣತ ಸೇರಿ ನಾಲ್ವರು ಉಗ್ರರು ಹತ್ಯೆಯಾಗಿದ್ದಾರೆ.</p>.<p>ಪುಲ್ವಾಮ ಜಿಲ್ಲೆಯ ತ್ರಾಲ್ ಸಮೀಪದ ಹರ್ದುಮಿರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದು, ಹತ್ಯೆಯಾದವರನ್ನು ನದೀಂ ಭಟ್ ಹಾಗೂ ರಸೂಲ್ ಅಲಿಯಾಸ್ ಆದಿಲ್ ಎಂದು ಗುರುತಿಸಲಾಗಿದೆ.</p>.<p>‘ಹತ್ಯೆಯಾದ ರಸೂಲ್ ಆದಿಲ್ ಸುಧಾರಿತ ಸ್ಫೋಟಕ ಪರಿಣತನಾಗಿದ್ದು,ಈತ ನಿಷೇಧಿತ ಅನ್ಸರ್ ಗಜ್ವತ್-ಉಲ್-ಹಿಂದ್(ಎಜಿಯುಎಚ್) ಸಂಘಟನೆ ಜತೆ ಗುರುತಿಸಿಕೊಂಡಿದ್ದ. ಹತ್ಯೆಯಾದ ಈ ಇಬ್ಬರು ಗ್ರೆನೆಡ್ ದಾಳಿ ಸೇರಿದಂತೆ ಹಲವು ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿದ್ದರು.ಈ ಉಗ್ರರಿಂದ ಎರಡು ಎಕೆ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಕಾಶ್ಮೀರ ವಲಯ ಐಜಿಪಿ ವಿಜಯಕುಮಾರ್ ತಿಳಿಸಿದರು.</p>.<p>‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು, ಸೇನೆ ಹಾಗೂ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ನಂತರ ಭದ್ರತಾ ಪಡೆಗಳ ಪ್ರತಿದಾಳಿಗೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ’ ಎಂದು ಅವರು ತಿಳಿಸಿದರು.</p>.<p>ಶೋಪಿಯಾನ್ ಜಿಲ್ಲೆಯ ಚೌಗಮ್ ಪ್ರದೇಶದಲ್ಲಿ ಶನಿವಾರ ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಲಷ್ಕರ್–ಎ–ತೈಬಾ (ಎಲ್ಇಟಿ) ಉಗ್ರರು ಹತರಾಗಿದ್ದು, ಹತ್ಯೆಯಾದವರನ್ನು ಸಜಾದ್ ಅಹ್ಮದ್ ಚೆಕ್ ಹಾಗೂ ರಾಜ ಬಸಿತ್ ನಜೀರ್ ಎಂದು ಗುರುತಿಸಲಾಗಿದೆ.</p>.<p>‘ಹತ್ಯೆಯಾದ ಉಗ್ರರ ಪೈಕಿ ಒಬ್ಬ ಗ್ರೆನೆಡ್ ದಾಳಿ ಹಾಗೂ ನಾಗರಿಕರ ಹತ್ಯೆಯಲ್ಲಿ ಪಾಲ್ಗೊಂಡಿದ್ದ. ಮತ್ತೊಬ್ಬ ಇತ್ತೀಚೆಗಷ್ಟೆ ಉಗ್ರ ಸಂಘಟನೆ ಸೇರಿದ್ದ’ ಎಂದು ಐಜಿಪಿ ವಿಜಯಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>