<p class="bodytext"><strong>ಶ್ರೀನಗರ</strong>: ‘ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ನಾಲ್ವರು ಭಯೋತ್ಪಾದಕರು ಸಕ್ರಿಯವಾಗಿದ್ದು, ಅವರನ್ನು ತಟಸ್ಥಗೊಳಿಸಲು ಭದ್ರತಾ ಪಡೆಗಳು ಕಾರ್ಯನಿರತವಾಗಿವೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p>.<p class="bodytext">ಭದ್ರತಾ ಪಡೆಗಳ ಮೇಲೆ ಹೆಚ್ಚುತ್ತಿರುವ ದಾಳಿಯ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಐಜಿಪಿ (ಕಾಶ್ಮೀರ ವಲಯ) ವಿಜಯಕುಮಾರ್ ‘ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ’ ಎಂದರು.</p>.<p class="bodytext">‘ಕಳೆದ ವಾರ ಎರಡು ಗ್ರನೇಡ್ ದಾಳಿಗಳು ನಡೆದಿದ್ದು, ಪೊಲೀಸ್ ಅಧಿಕಾರಿಯೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಶ್ರೀನಗರದಲ್ಲಿ ನಾಲ್ವರು ಭಯೋತ್ಪಾದಕರು ಸಕ್ರಿಯರಾಗಿದ್ದಾರೆ. ನಾವು ಅವರನ್ನು ಬಂಧಿಸುತ್ತೇವೆ ಇಲ್ಲವೇ ಎನ್ಕೌಂಟರ್ ಮಾಡುತ್ತೇವೆ’ ಎಂದು ಅವರು ತಿಳಿಸಿದರು.</p>.<p class="bodytext">‘ಕಳೆದ ವರ್ಷ ಹತನಾದ ದಿ ರೆಸಿಸ್ಟನ್ಸ್ ಫ್ರಂಟ್ನ ಮುಖ್ಯಸ್ಥನಾಗಿದ್ದ ಉಗ್ರ ಅಬ್ಬಾಸ್ ಶೇಖ್, ಸಾಯುವ ಮುನ್ನ ಶ್ರೀನಗರದಲ್ಲಿ ಏಳು ಭಯೋತ್ಪಾದಕರನ್ನು ಸಕ್ರಿಯಗೊಳಿಸಿದ್ದ. ಅದರಲ್ಲಿ ಸಾಕಿಬ್ ಮಂಜೂರ್ ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಲಾಗಿದೆ’ ಎಂದೂ ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಶ್ರೀನಗರ</strong>: ‘ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ನಾಲ್ವರು ಭಯೋತ್ಪಾದಕರು ಸಕ್ರಿಯವಾಗಿದ್ದು, ಅವರನ್ನು ತಟಸ್ಥಗೊಳಿಸಲು ಭದ್ರತಾ ಪಡೆಗಳು ಕಾರ್ಯನಿರತವಾಗಿವೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p>.<p class="bodytext">ಭದ್ರತಾ ಪಡೆಗಳ ಮೇಲೆ ಹೆಚ್ಚುತ್ತಿರುವ ದಾಳಿಯ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಐಜಿಪಿ (ಕಾಶ್ಮೀರ ವಲಯ) ವಿಜಯಕುಮಾರ್ ‘ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ’ ಎಂದರು.</p>.<p class="bodytext">‘ಕಳೆದ ವಾರ ಎರಡು ಗ್ರನೇಡ್ ದಾಳಿಗಳು ನಡೆದಿದ್ದು, ಪೊಲೀಸ್ ಅಧಿಕಾರಿಯೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಶ್ರೀನಗರದಲ್ಲಿ ನಾಲ್ವರು ಭಯೋತ್ಪಾದಕರು ಸಕ್ರಿಯರಾಗಿದ್ದಾರೆ. ನಾವು ಅವರನ್ನು ಬಂಧಿಸುತ್ತೇವೆ ಇಲ್ಲವೇ ಎನ್ಕೌಂಟರ್ ಮಾಡುತ್ತೇವೆ’ ಎಂದು ಅವರು ತಿಳಿಸಿದರು.</p>.<p class="bodytext">‘ಕಳೆದ ವರ್ಷ ಹತನಾದ ದಿ ರೆಸಿಸ್ಟನ್ಸ್ ಫ್ರಂಟ್ನ ಮುಖ್ಯಸ್ಥನಾಗಿದ್ದ ಉಗ್ರ ಅಬ್ಬಾಸ್ ಶೇಖ್, ಸಾಯುವ ಮುನ್ನ ಶ್ರೀನಗರದಲ್ಲಿ ಏಳು ಭಯೋತ್ಪಾದಕರನ್ನು ಸಕ್ರಿಯಗೊಳಿಸಿದ್ದ. ಅದರಲ್ಲಿ ಸಾಕಿಬ್ ಮಂಜೂರ್ ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಲಾಗಿದೆ’ ಎಂದೂ ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>