ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರತೆ ಒದಗಿಸದ ಸರ್ಕಾರ: ಕಾಶ್ಮೀರದಲ್ಲಿ ಭಾರತ್ ಜೋಡೊ ಯಾತ್ರೆ ಕೆಲಕಾಲ ಸ್ಥಗಿತ

Last Updated 27 ಜನವರಿ 2023, 9:07 IST
ಅಕ್ಷರ ಗಾತ್ರ

ನದೆದೆಹಲಿ: ಕಾಶ್ಮೀರದ ಬನಿಹಾಲ್‌ನಲ್ಲಿ ಭದ್ರತಾ ಲೋಪದಿಂದಾಗಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಭದ್ರತಾ ಲೋಪದಿಂದಾಗಿ ಯಾತ್ರೆಯನ್ನು 20 ನಿಮಿಷ ಸ್ಥಗಿತಗೊಳಿಸಲಾಗಿತ್ತು. ಬಳಿಕ ಯಾತ್ರೆ ಮತ್ತೆ ಆರಂಭಿಸಲಾಯಿತು ಎಂದು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಭಾರತ್ ಜೋಡೊ ಯಾತ್ರೆಗೆ ಭದ್ರತೆ ಒದಗಿಸಲು ಸ್ಥಳೀಯ ಆಡಳಿತ ವಿಫಲವಾಗಿದೆ ಎಂದು ಜಮ್ಮು –ಕಾಶ್ಮೀರದ ಕಾಂಗ್ರೆಸ್ ಉಸ್ತುವಾರಿ ರಜನಿ ಪಾಟೀಲ್ ಟ್ವೀಟ್ ಮಾಡಿದ್ದಾರೆ.

2022 ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆಯು ಜ.19ರಂದು ಕಾಶ್ಮೀರಕ್ಕೆ ಪ್ರವೇಶಿಸಿತ್ತು. ಯಾತ್ರೆ ಜನವರಿ 30ರಂದು ಶ್ರೀನಗರದಲ್ಲಿ ಕೊನೆಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT