<p>ನವದೆಹಲಿ (ಪಿಟಿಐ): ಕೇಂದ್ರದ ನೂತನ 39 ಸಚಿವರು ಕೈಗೊಂಡಿರುವ ಜನಾಶೀರ್ವಾದ ಯಾತ್ರೆಯು ಪ್ರತಿಪಕ್ಷಗಳ ಮುಖಂಡರನ್ನು ವಿಚಲಿತಗೊಳಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.</p>.<p class="bodytext">ಈ ಕುರಿತ ಹೇಳಿಕೆಯಲ್ಲಿ ಅವರು, ‘ಜನರು ಮೋದಿ ಸರ್ಕಾರಕ್ಕೆ ಬೆಂಬಲ ಮತ್ತು ವಿಶ್ವಾಸ ಮುಂದುವರಿಸಿದ್ದಾರೆ. ಇದಕ್ಕೆ ಧಕ್ಕೆಯುಂಟುಮಾಡುವ ವಿರೋಧಪಕ್ಷಗಳ ಮುಖಂಡರ ಯತ್ನ ವಿಫಲವಾಗಿದೆ’ ಎಂದು ಹೇಳಿದ್ದಾರೆ.</p>.<p>ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಗುರಿಯಾಗಿಸಿ ಕ್ರಮಜರುಗಿಸಿರುವ ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಇದು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ ಎಂದು ಟೀಕಿಸಿದರು.</p>.<p>ಜನಾಶೀರ್ವಾದ ಯಾತ್ರೆ ದೇಶದಾದ್ಯಂತ ಭಾರಿ ಯಶಸ್ಸು ಕಂಡಿದೆ. ಜನರು ಆಗಲೇ ನಕಾರಾತ್ಮಕ ರಾಜಕಾರಣದ ಕಾರ್ಯಸೂಚಿಯನ್ನು ತಿರಸ್ಕರಿಸಿದ್ದಾರೆ. ಆಗಸ್ಟ್ 15 ರಿಂದ 28ರವರೆಗೆ ಯಾತ್ರೆ ನಡೆದಿದ್ದು, 24 ಸಾವಿರ ಕಿ.ಮೀ ಸಂಚರಿಸಿದ್ದು, 5 ಸಾವಿರ ಕಾರ್ಯಕ್ರಮ ಸಂಘಟಿಸಲಾಗಿತ್ತು ಎಂದು ಅವರು ತಿಳಿಸಿದರು.</p>.<p>ಜನಾಶೀರ್ವಾದ ಯಾತ್ರೆಗೆ ದೊರೆತ ಯಶಸ್ಸು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ವ್ಯಕ್ತಪಡಿಸಿರುವ ನಂಬಿಕೆ ಮತ್ತು ವಿಶ್ವಾಸವೂ ಆಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಕೇಂದ್ರದ ನೂತನ 39 ಸಚಿವರು ಕೈಗೊಂಡಿರುವ ಜನಾಶೀರ್ವಾದ ಯಾತ್ರೆಯು ಪ್ರತಿಪಕ್ಷಗಳ ಮುಖಂಡರನ್ನು ವಿಚಲಿತಗೊಳಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.</p>.<p class="bodytext">ಈ ಕುರಿತ ಹೇಳಿಕೆಯಲ್ಲಿ ಅವರು, ‘ಜನರು ಮೋದಿ ಸರ್ಕಾರಕ್ಕೆ ಬೆಂಬಲ ಮತ್ತು ವಿಶ್ವಾಸ ಮುಂದುವರಿಸಿದ್ದಾರೆ. ಇದಕ್ಕೆ ಧಕ್ಕೆಯುಂಟುಮಾಡುವ ವಿರೋಧಪಕ್ಷಗಳ ಮುಖಂಡರ ಯತ್ನ ವಿಫಲವಾಗಿದೆ’ ಎಂದು ಹೇಳಿದ್ದಾರೆ.</p>.<p>ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಗುರಿಯಾಗಿಸಿ ಕ್ರಮಜರುಗಿಸಿರುವ ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಇದು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ ಎಂದು ಟೀಕಿಸಿದರು.</p>.<p>ಜನಾಶೀರ್ವಾದ ಯಾತ್ರೆ ದೇಶದಾದ್ಯಂತ ಭಾರಿ ಯಶಸ್ಸು ಕಂಡಿದೆ. ಜನರು ಆಗಲೇ ನಕಾರಾತ್ಮಕ ರಾಜಕಾರಣದ ಕಾರ್ಯಸೂಚಿಯನ್ನು ತಿರಸ್ಕರಿಸಿದ್ದಾರೆ. ಆಗಸ್ಟ್ 15 ರಿಂದ 28ರವರೆಗೆ ಯಾತ್ರೆ ನಡೆದಿದ್ದು, 24 ಸಾವಿರ ಕಿ.ಮೀ ಸಂಚರಿಸಿದ್ದು, 5 ಸಾವಿರ ಕಾರ್ಯಕ್ರಮ ಸಂಘಟಿಸಲಾಗಿತ್ತು ಎಂದು ಅವರು ತಿಳಿಸಿದರು.</p>.<p>ಜನಾಶೀರ್ವಾದ ಯಾತ್ರೆಗೆ ದೊರೆತ ಯಶಸ್ಸು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ವ್ಯಕ್ತಪಡಿಸಿರುವ ನಂಬಿಕೆ ಮತ್ತು ವಿಶ್ವಾಸವೂ ಆಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>