ತಿರುಪತಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಪವನ್ ಕಲ್ಯಾಣ್ ಅವರು ಶುಕ್ರವಾರ ಭೇಟಿ ನೀಡಿದ್ದಾರೆ. ಆ ವೇಳೆಯಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ₹30 ಲಕ್ಷ ದೇಣಿಗೆ ನೀಡುವುದಾಗಿ ಪವನ್ ಕಲ್ಯಾಣ್ ಘೋಷಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.