ಅಗ್ನಿ ಅನಾಹುತ: ವೈದ್ಯ ದಂಪತಿ ಸೇರಿ ಐವರ ಸಾವು

ಧನಬಾದ್, ಜಾರ್ಖಂಡ್: ಇಲ್ಲಿನ ನರ್ಸಿಂಗ್ ಹೋಂವೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ವೈದ್ಯ ದಂಪತಿ ಸೇರಿ ಐವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ನರ್ಸಿಂಗ್ ಹೋಂನ ಮಾಲೀಕ ಡಾ. ವಿಕಾಸ್ ಹಜ್ರಾ, ಪತ್ನಿ ಡಾ. ಪ್ರೇಮಾ ಹಜ್ರಾ, ವಿಕಾಸ್ ಅವರ ಸೋದರಳಿಯ ಸೋಹನ್ ಖಮಾರಿ, ಮನೆಕೆಲಸದಾಕೆ ತಾರಾ ದೇವಿ ಮತ್ತು ಇನ್ನೊಬ್ಬರು ಮೃತಪಟ್ಟಿದ್ದಾರೆ ಎಂದೂ ವಿವರಿಸಿದ್ದಾರೆ.
ನರ್ಸಿಂಗ್ ಹೋಂನ ದಾಸ್ತಾನು ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಿಂದ ಹೊರಹೊಮ್ಮಿದ ಹೊಗೆಯಿಂದಾಗಿ ಐವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅಗ್ನಿ ಶಾಮಕದಳದ ಆರು ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿವೆ ಎಂದು ಹೇಳಿದ್ದಾರೆ.
ಒಬ್ಬರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.
‘ಅಗ್ನಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.