<p><strong>ಪಣಜಿ:</strong> ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಇಲ್ಲಿ ಮಹದಾಯಿ ವಿವಾದ ಕುರಿತ ಪ್ರಶ್ನೆಗೆ ಉತ್ತರಿಸದೇ ನುಣುಚಿಕೊಂಡರು.</p>.<p>ವಿವಾದ ಕುರಿತು ಕೇಂದ್ರದ ನಿಲುವೇನು ಎಂಬ ಪ್ರಶ್ನೆಗೆ, ‘ಇದಕ್ಕೆ ಮುಖ್ಯಮಂತ್ರಿ ಉತ್ತರಿಸುತ್ತಾರೆ. ವಿಷಯ ಕೋರ್ಟ್ನಲ್ಲಿ ಇದ್ದು, ಈ ಸಂಬಂಧ ಯಾವುದೇ ಬೆಳವಣಿಗೆ ಆಗುತ್ತಿಲ್ಲ’ ಎಂದು ಜಾವಡೇಕರ್ ಪ್ರತಿಕ್ರಿಯಿಸಿದರು.</p>.<p>ಸಚಿವರು ಪ್ರತಿಕ್ರಿಯಿಸಲು ನಿರಾಕರಿಸಿದ್ದರ ಕುರಿತು ಟ್ವೀಟ್ ಮಾಡಿರುವ ಗೋವಾದ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್, ‘ಉತ್ತರಿಸದ ಧೋರಣೆಯು, ರಾಜಕೀಯ ಲಾಭಕ್ಕೆಬಿಜೆಪಿಯು ಗೋವಾದ ಜೀವನದಿಯನ್ನು ಕರ್ನಾಟಕಕ್ಕೆ ಮಾರಿಕೊಂಡಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ’ ಎಂದು ಟೀಕಿಸಿದ್ದಾರೆ.</p>.<p>ಮಹದಾಯಿ ಕುರಿತು ಚರ್ಚಿಸುವುದಕ್ಕೆ ಸಚಿವರ ಭೇಟಿಗೆ ಅವಕಾಶ ನಿರಾಕರಿಸಿದ ನಂತರ ಕಾಂಗ್ರೆಸ್ ಕಾರ್ಯಕರ್ತರು, ಅವರು ವಾಸ್ತವ್ಯ ಹೂಡಿದ್ದ ರೆಸಾರ್ಟ್ ಎದುರು ಧರಣಿ ನಡೆಸಿದ್ದರು. ಪ್ರತಿಭಟನೆ ಸಂಬಂಧ 13 ಕಾರ್ಯಕರ್ತರನ್ನು ಬಂಧಿಸಲಾಗಿತ್ತು.</p>.<p><strong>‘ಮಧ್ಯವರ್ತಿಗಳಿಗೇ ಮಧ್ಯವರ್ತಿಗಳು’:</strong></p>.<p>ಕೃಷಿ ಮಸೂದೆಗಳನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳು ಈ ಮೂಲಕ ‘ಮಧ್ಯವರ್ತಿಗಳಿಗೆ ಮಧ್ಯವರ್ತಿಗಳಾಗಿ’ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಕಾಶ್ ಜಾವಡೇಕರ್ ಟೀಕಿಸಿದ್ದಾರೆ.</p>.<p>ಮಸೂದೆ ಕುರಿತು ಕೃಷಿಕರ ಆತಂಕ ನಿವಾರಿಸಲು ಕೃಷಿಕರ ಸಂಘಟನೆಗಳ ಜೊತೆ ಚರ್ಚಿಸಲು ಎರಡು ದಿನಗಳ ಭೇಟಿಗೆ ಇಲ್ಲಿಗೆ ಬಂದಿದ್ದಾರೆ. ‘ರೈತರಿಗೆ ಕಡಿಮೆ ಲಾಭ ಸಿಗುತ್ತಿದೆ. ಗ್ರಾಹಕರು ಹೆಚ್ಚಿನ ಬೆಲೆ ಕೊಟ್ಟು ಖರೀದಿಸಬೇಕಾಗಿದೆ. ಇದು, ಈಗಿನ ವಾಸ್ತವ’ ಎಂದರು.</p>.<p>ಮಧ್ಯವರ್ತಿಗಳು ಕೃಷಿ ಉತ್ಪನ್ನಗಳ ದರ ಏರಿಸುತ್ತಾರೆ. ಈ ಸಮಸ್ಯೆಯನ್ನು ನೀಗಿಸುವುದು ಮಸೂದೆಯ ಉದ್ದೇಶ. ಈಗಿನ ಪ್ರತಿಭಟನೆ ಗಮನಿಸಿದರೆ ವಿರೋಧವು ಮಧ್ಯವರ್ತಿಗಳು ಮಧ್ಯವರ್ತಿಗಳಾಗಿ ಕಾರ್ಯ ನಿರ್ವಹಿಸುತ್ತಿರುವಂತೆಯೇ ಇದೆ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಇಲ್ಲಿ ಮಹದಾಯಿ ವಿವಾದ ಕುರಿತ ಪ್ರಶ್ನೆಗೆ ಉತ್ತರಿಸದೇ ನುಣುಚಿಕೊಂಡರು.</p>.<p>ವಿವಾದ ಕುರಿತು ಕೇಂದ್ರದ ನಿಲುವೇನು ಎಂಬ ಪ್ರಶ್ನೆಗೆ, ‘ಇದಕ್ಕೆ ಮುಖ್ಯಮಂತ್ರಿ ಉತ್ತರಿಸುತ್ತಾರೆ. ವಿಷಯ ಕೋರ್ಟ್ನಲ್ಲಿ ಇದ್ದು, ಈ ಸಂಬಂಧ ಯಾವುದೇ ಬೆಳವಣಿಗೆ ಆಗುತ್ತಿಲ್ಲ’ ಎಂದು ಜಾವಡೇಕರ್ ಪ್ರತಿಕ್ರಿಯಿಸಿದರು.</p>.<p>ಸಚಿವರು ಪ್ರತಿಕ್ರಿಯಿಸಲು ನಿರಾಕರಿಸಿದ್ದರ ಕುರಿತು ಟ್ವೀಟ್ ಮಾಡಿರುವ ಗೋವಾದ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್, ‘ಉತ್ತರಿಸದ ಧೋರಣೆಯು, ರಾಜಕೀಯ ಲಾಭಕ್ಕೆಬಿಜೆಪಿಯು ಗೋವಾದ ಜೀವನದಿಯನ್ನು ಕರ್ನಾಟಕಕ್ಕೆ ಮಾರಿಕೊಂಡಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ’ ಎಂದು ಟೀಕಿಸಿದ್ದಾರೆ.</p>.<p>ಮಹದಾಯಿ ಕುರಿತು ಚರ್ಚಿಸುವುದಕ್ಕೆ ಸಚಿವರ ಭೇಟಿಗೆ ಅವಕಾಶ ನಿರಾಕರಿಸಿದ ನಂತರ ಕಾಂಗ್ರೆಸ್ ಕಾರ್ಯಕರ್ತರು, ಅವರು ವಾಸ್ತವ್ಯ ಹೂಡಿದ್ದ ರೆಸಾರ್ಟ್ ಎದುರು ಧರಣಿ ನಡೆಸಿದ್ದರು. ಪ್ರತಿಭಟನೆ ಸಂಬಂಧ 13 ಕಾರ್ಯಕರ್ತರನ್ನು ಬಂಧಿಸಲಾಗಿತ್ತು.</p>.<p><strong>‘ಮಧ್ಯವರ್ತಿಗಳಿಗೇ ಮಧ್ಯವರ್ತಿಗಳು’:</strong></p>.<p>ಕೃಷಿ ಮಸೂದೆಗಳನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳು ಈ ಮೂಲಕ ‘ಮಧ್ಯವರ್ತಿಗಳಿಗೆ ಮಧ್ಯವರ್ತಿಗಳಾಗಿ’ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಕಾಶ್ ಜಾವಡೇಕರ್ ಟೀಕಿಸಿದ್ದಾರೆ.</p>.<p>ಮಸೂದೆ ಕುರಿತು ಕೃಷಿಕರ ಆತಂಕ ನಿವಾರಿಸಲು ಕೃಷಿಕರ ಸಂಘಟನೆಗಳ ಜೊತೆ ಚರ್ಚಿಸಲು ಎರಡು ದಿನಗಳ ಭೇಟಿಗೆ ಇಲ್ಲಿಗೆ ಬಂದಿದ್ದಾರೆ. ‘ರೈತರಿಗೆ ಕಡಿಮೆ ಲಾಭ ಸಿಗುತ್ತಿದೆ. ಗ್ರಾಹಕರು ಹೆಚ್ಚಿನ ಬೆಲೆ ಕೊಟ್ಟು ಖರೀದಿಸಬೇಕಾಗಿದೆ. ಇದು, ಈಗಿನ ವಾಸ್ತವ’ ಎಂದರು.</p>.<p>ಮಧ್ಯವರ್ತಿಗಳು ಕೃಷಿ ಉತ್ಪನ್ನಗಳ ದರ ಏರಿಸುತ್ತಾರೆ. ಈ ಸಮಸ್ಯೆಯನ್ನು ನೀಗಿಸುವುದು ಮಸೂದೆಯ ಉದ್ದೇಶ. ಈಗಿನ ಪ್ರತಿಭಟನೆ ಗಮನಿಸಿದರೆ ವಿರೋಧವು ಮಧ್ಯವರ್ತಿಗಳು ಮಧ್ಯವರ್ತಿಗಳಾಗಿ ಕಾರ್ಯ ನಿರ್ವಹಿಸುತ್ತಿರುವಂತೆಯೇ ಇದೆ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>