<p><strong>ನವದೆಹಲಿ: </strong>ರಾಷ್ಟ್ರಪತಿ ಭವನದಲ್ಲಿ ಕೆಲಸಕ್ಕಿದ್ದ 40 ವರ್ಷದ ಯೋಧರೊಬ್ಬರು ರಾಷ್ಟ್ರಪತಿ ಭವನದ ಗೂರ್ಖಾ ರೈಫಲ್ಸ್ಗೆ ಸೇರಿದ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಬುಧವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ಎಂದು ಪೊಲೀಸರು ತಿಳಿಸಿದರು.</p>.<p>ನೇಪಾಳದ ತಿಹಾಯನ್ ನಿವಾಸಿಟೆಕ್ ಬಹದ್ದೂರ್ ಥಾಪಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗಳನ್ನು ನಡೆಸುತ್ತಿದೆ ಎಂದು ನವದೆಹಲಿಯ ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ದೀಪಕ್ ಯಾದವ್ ಅವರು ತಿಳಿಸಿದರು.</p>.<p>ಮುಂಜಾನೆ 3.30 ರ ಸುಮಾರಿಗೆ ಟೆಕ್ ಬಹದ್ದೂರ್ ಅವರು ಫ್ಯಾನ್ಸ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಅವರು ಸಹದ್ಯೋಗಿ ಗಮನಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎಂದು ಅವರು ಮಾಹಿತಿ ನೀಡಿದರು.</p>.<p>ಯೋಧ ತೀವ್ರ ಬೆನ್ನು ನೋವು ಮತ್ತು ಅಧಿಕರಕ್ತದೊತ್ತಡದಿಂದ ಬಳಲುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ದೀಪಕ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಷ್ಟ್ರಪತಿ ಭವನದಲ್ಲಿ ಕೆಲಸಕ್ಕಿದ್ದ 40 ವರ್ಷದ ಯೋಧರೊಬ್ಬರು ರಾಷ್ಟ್ರಪತಿ ಭವನದ ಗೂರ್ಖಾ ರೈಫಲ್ಸ್ಗೆ ಸೇರಿದ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಬುಧವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ಎಂದು ಪೊಲೀಸರು ತಿಳಿಸಿದರು.</p>.<p>ನೇಪಾಳದ ತಿಹಾಯನ್ ನಿವಾಸಿಟೆಕ್ ಬಹದ್ದೂರ್ ಥಾಪಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗಳನ್ನು ನಡೆಸುತ್ತಿದೆ ಎಂದು ನವದೆಹಲಿಯ ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ದೀಪಕ್ ಯಾದವ್ ಅವರು ತಿಳಿಸಿದರು.</p>.<p>ಮುಂಜಾನೆ 3.30 ರ ಸುಮಾರಿಗೆ ಟೆಕ್ ಬಹದ್ದೂರ್ ಅವರು ಫ್ಯಾನ್ಸ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಅವರು ಸಹದ್ಯೋಗಿ ಗಮನಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎಂದು ಅವರು ಮಾಹಿತಿ ನೀಡಿದರು.</p>.<p>ಯೋಧ ತೀವ್ರ ಬೆನ್ನು ನೋವು ಮತ್ತು ಅಧಿಕರಕ್ತದೊತ್ತಡದಿಂದ ಬಳಲುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ದೀಪಕ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>