<p><strong>ಪಟ್ನಾ:</strong> ಎಲ್ಜೆಪಿ ಮತ್ತು ಆ ಪಕ್ಷದ ನಾಯಕ ಚಿರಾಗ್ ಪಾಸ್ವಾನ್ ಕುರಿತ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಹಾರ ಮುಖ್ಯಮಂತ್ರಿನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಪಕ್ಷವು ಬಿಜೆಪಿಯನ್ನು ಒತ್ತಾಯಿಸಿದೆ ಎಂದು ವರದಿಯಾಗಿದೆ.</p>.<p>ಜೆಡಿಯು ತಮ್ಮ ಪಕ್ಷದ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿತ್ತು ಎಂದು ಈ ಹಿಂದೆಯೇ ಆರೋಪಿಸಿರುವ ಚಿರಾಗ್ ಪಾಸ್ವಾನ್, ತಂದೆ ದಿ. ರಾಮ್ವಿಲಾಸ್ ಪಾಸ್ವಾನ್ಗೆ ನಿತೀಶ್ ಕುಮಾರ್ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ, ಬಿಹಾರ ಚುನಾವಣೆಯಲ್ಲಿ ಜೆಡಿಯು ಜತೆ ಸ್ಪರ್ಧಿಸುವುದಿಲ್ಲ ಎಂದೂ ಘೋಷಿಸಿದ್ದರು. ಆದರೆ, ಬಿಜೆಪಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.</p>.<p>ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಬಿಜೆಪಿಯುು ಜೆಡಿಯು ಜತೆಗೆ ಮೈತ್ರಿ ಮುಂದುವರಿಸಿದ್ದು, ಚಿರಾಗ್ ವಿಚಾರದಲ್ಲಿ ಮೌನ ತಾಳಿದೆ. ಹೀಗಾಗಿ, ಎಲ್ಜೆಪಿ ವಿಚಾರದಲ್ಲಿ ಬಿಜೆಪಿಯು ನಿಲುವು ಸ್ಪಷ್ಟಪಡಿಸಬೇಕು ಎಂದು ಜೆಡಿಯು ಆಗ್ರಹಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.</p>.<p>ಜೆಡಿಯು ವಿರುದ್ಧ ಶನಿವಾರವೂ ಆಕ್ರೋಶ ವ್ಯಕ್ತಪಡಿಸಿದ್ದ ಚಿರಾಗ್, ನಿತೀಶ್ ಕುಮಾರ್ ಅವರು ಮತ್ತೆ ಬಿಹಾರದ ಮುಖ್ಯಮಂತ್ರಿಯಾದರೆ ಎನ್ಡಿಎ ಮೈತ್ರಿಕೂಟ ತೊರೆಯುವುದಾಗಿ ಹೇಳಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/bihar-elections-chirag-paswan-says-will-quit-nda-if-nitish-kumar-becomes-cm-again-771702.html" target="_blank">ನಿತೀಶ್ ಕುಮಾರ್ ಮುಖ್ಯಮಂತ್ರಿಯಾದರೆ ಎನ್ಡಿಎ ತೊರೆಯುವೆ ಎಂದ ಚಿರಾಗ್ ಪಾಸ್ವಾನ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಎಲ್ಜೆಪಿ ಮತ್ತು ಆ ಪಕ್ಷದ ನಾಯಕ ಚಿರಾಗ್ ಪಾಸ್ವಾನ್ ಕುರಿತ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಹಾರ ಮುಖ್ಯಮಂತ್ರಿನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಪಕ್ಷವು ಬಿಜೆಪಿಯನ್ನು ಒತ್ತಾಯಿಸಿದೆ ಎಂದು ವರದಿಯಾಗಿದೆ.</p>.<p>ಜೆಡಿಯು ತಮ್ಮ ಪಕ್ಷದ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿತ್ತು ಎಂದು ಈ ಹಿಂದೆಯೇ ಆರೋಪಿಸಿರುವ ಚಿರಾಗ್ ಪಾಸ್ವಾನ್, ತಂದೆ ದಿ. ರಾಮ್ವಿಲಾಸ್ ಪಾಸ್ವಾನ್ಗೆ ನಿತೀಶ್ ಕುಮಾರ್ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ, ಬಿಹಾರ ಚುನಾವಣೆಯಲ್ಲಿ ಜೆಡಿಯು ಜತೆ ಸ್ಪರ್ಧಿಸುವುದಿಲ್ಲ ಎಂದೂ ಘೋಷಿಸಿದ್ದರು. ಆದರೆ, ಬಿಜೆಪಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.</p>.<p>ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಬಿಜೆಪಿಯುು ಜೆಡಿಯು ಜತೆಗೆ ಮೈತ್ರಿ ಮುಂದುವರಿಸಿದ್ದು, ಚಿರಾಗ್ ವಿಚಾರದಲ್ಲಿ ಮೌನ ತಾಳಿದೆ. ಹೀಗಾಗಿ, ಎಲ್ಜೆಪಿ ವಿಚಾರದಲ್ಲಿ ಬಿಜೆಪಿಯು ನಿಲುವು ಸ್ಪಷ್ಟಪಡಿಸಬೇಕು ಎಂದು ಜೆಡಿಯು ಆಗ್ರಹಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.</p>.<p>ಜೆಡಿಯು ವಿರುದ್ಧ ಶನಿವಾರವೂ ಆಕ್ರೋಶ ವ್ಯಕ್ತಪಡಿಸಿದ್ದ ಚಿರಾಗ್, ನಿತೀಶ್ ಕುಮಾರ್ ಅವರು ಮತ್ತೆ ಬಿಹಾರದ ಮುಖ್ಯಮಂತ್ರಿಯಾದರೆ ಎನ್ಡಿಎ ಮೈತ್ರಿಕೂಟ ತೊರೆಯುವುದಾಗಿ ಹೇಳಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/bihar-elections-chirag-paswan-says-will-quit-nda-if-nitish-kumar-becomes-cm-again-771702.html" target="_blank">ನಿತೀಶ್ ಕುಮಾರ್ ಮುಖ್ಯಮಂತ್ರಿಯಾದರೆ ಎನ್ಡಿಎ ತೊರೆಯುವೆ ಎಂದ ಚಿರಾಗ್ ಪಾಸ್ವಾನ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>