ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: 14 ಮಂದಿ ಜೀವಂತ ದಹನ

Last Updated 1 ಫೆಬ್ರುವರಿ 2023, 2:53 IST
ಅಕ್ಷರ ಗಾತ್ರ

ಧನ್‌ಬಾದ್‌, ಜಾರ್ಖಂಡ್: ಇಲ್ಲಿನ ಜೋರಫಾತಕ್ ವಲಯದ ಬಹುಮಹಡಿ ಕಟ್ಟಡದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿ 14 ಮಂದಿ ಜೀವಂತ ದಹನವಾಗಿದ್ದಾರೆ.

‘ಹಲವರು ಕಟ್ಟಡದಲ್ಲಿ ಸಿಲುಕಿದ್ದಾರೆ. ಅಗ್ನಿಶಾಮಕ ಸೇವೆಯ 40 ವಾಹನಗಳು ಧಾವಿಸಿದ್ದು, ರಕ್ಷಣಾ ಕಾರ್ಯ ನಡೆದಿದೆ’ ಎಂದು ಡಿಸಿಪಿ ಸಂದೀಪ್‌ ಸಿಂಗ್ ಹೇಳಿದರು.

‘11 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ‘ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಖದೇವ್ ಸಿಂಗ್ ಅವರು ತಿಳಿಸಿದ್ದಾರೆ.

ಈ ಮಧ್ಯೆ, ಮಾಜಿ ಮುಖ್ಯಮಂತ್ರಿ ಬಾಬುಲಾಲ್‌ ಮರಂಡಿ ಅವರು ಟ್ವೀಟ್‌ ಮಾಡಿದ್ದು, ಕಟ್ಟಡದಲ್ಲಿ ಇನ್ನೂ 50 ಮಂದಿ ಸಿಲುಕಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT