ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನರ್ಹಗೊಳಿಸಲು ಶಿಫಾರಸು: ಮಾಹಿತಿ ಬಹಿರಂಗಪಡಿಸಿ- ಹೇಮಂತ್‌ ಸೊರೇನ್‌

Last Updated 15 ಸೆಪ್ಟೆಂಬರ್ 2022, 14:03 IST
ಅಕ್ಷರ ಗಾತ್ರ

ರಾಂಚಿ: ‘ಚುನಾವಣಾ ಆಯೋಗವು ನನ್ನನ್ನು ಅನರ್ಹಗೊಳಿಸಲು ಶಿಫಾರಸು ಮಾಡಿದೆಯೇ ಇಲ್ಲವೇ ಎನ್ನುವುದನ್ನು ಸ್ಪಷ್ಟಪಡಿಸಿ’ ಎಂದು ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ರಾಜ್ಯಪಾಲ ರಮೇಶ್‌ ಬೈಸ್‌ ಅವರನ್ನು ಆಗ್ರಹಿಸಿದ್ದಾರೆ.

ರಾಜ್ಯಪಾಲರನ್ನು ಗುರುವಾರ ಭೇಟಿ ಮಾಡಿ, ಮನವಿ ಪತ್ರ ನೀಡಿದ ಸೊರೇನ್‌, ‘ಶಾಸಕರನ್ನು ಖರೀದಿಸಲು, ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯು ಈ ‘ಅನಿಶ್ಚಿತ ವಾತಾವರಣ’ವನ್ನು ಬಳಸಿಕೊಳ್ಳುತ್ತಿದೆ’ ಎಂದೂ ಆರೋಪಿಸಿದ್ದಾರೆ.

‘ಚುನಾವಣಾ ಆಯೋಗ ಏನು ಹೇಳಿದೆ ಎನ್ನುವ ಪತ್ರವನ್ನು ಬಹಿರಂಗಪಡಿಸಿ. ಈ ಕುರಿತು ಆದಷ್ಟು ಬೇಗ ಸೂಕ್ತ ವಿಚಾರಣೆ ನಡೆದು, ಈ ‘ಅನಿಶ್ಚಿತ ವಾತಾವರಣ’ವನ್ನು ಅಂತ್ಯಗೊಳಿಸಿ. ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಇಂಥ ವಾತಾವರಣ ಮಾರಕವಾಗಲಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT