‘ಪ್ರವಾಸಿಗರನ್ನು ಸುರಕ್ಷಿತವಾಗಿ ಏರ್ಲಿಫ್ಟ್ ಮಾಡಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ತಂಡವು ಭಾನುವಾರ ರಾತ್ರಿಯಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದು, 11 ಮಂದಿಯನ್ನು ರಕ್ಷಿಸಿದೆ. ಸ್ಥಳೀಯರೂ ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾಗುತ್ತಿದ್ದಾರೆ’ ಎಂದು ದೇವಘರ್ ಡಿಸಿ ಮಂಜುನಾಥ್ ಭಜಂತ್ರಿ ತಿಳಿಸಿದ್ದಾರೆ.