<p><strong>ಜಮ್ಶೆಡ್ಪುರ (ಜಾರ್ಖಂಡ್): </strong>ಮಹಿಳೆಯೊಬ್ಬರು ತನ್ನ ಪತಿಯನ್ನು ಕೊಲೆ ಮಾಡಿ, ಮನೆಯಲ್ಲಿಯೇ ಬೆಂಕಿ ಹಚ್ಚಿ ಸುಟ್ಟು ಹಾಕಲು ಯತ್ನಿಸಿರುವ ಪ್ರಕರಣ ಜಮ್ಶೆಡ್ಪುರದ ಸುಭಾಷ್ ಕಾಲೋನಿಯಲ್ಲಿ ವರದಿಯಾಗಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ.</p>.<p>ಆರೋಪಿ ಮಹಿಳೆಯು ಮನೆಯ ಒಳಗಿನಿಂದ ಬಾಗಿಲು ಹಾಕಿಕೊಂಡು, ಯಾರೊಬ್ಬರೂ ಪ್ರವೇಶಿಸದಂತೆ ತಡೆಯಲು ಬಾಗಿಲಿಗೆ ವಿದ್ಯುತ್ ಸಂಪರ್ಕ ನೀಡಿದ್ದಾಳೆ.</p>.<p>ಕೊಲೆಯಾದ ವ್ಯಕ್ತಿಯನ್ನು ಅಮರನಾಥ್ ಸಿಂಗ್ ಎಂದು ಗುರುತಿಸಲಾಗಿದ್ದು, ಟ್ರಾನ್ಸ್ಪೋರ್ಟ್ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ವಿದ್ಯಾಭ್ಯಾಸದ ಕಾರಣದಿಂದ ಬೇರೆ ನಗರಗಳಲ್ಲಿ ಇದ್ದರು.</p>.<p>ಬಾಗಿಲಿಗೆ ವಿದ್ಯುತ್ ಪ್ರವಹಿಸುವಂತೆ ಮಾಡಿದ್ದ ಸಂಪರ್ಕ ಕಡಿತಗೊಳಿಸಿ, ಬಳಿಕ ಮನೆಯೊಳಗೆ ಹೋದ ಪೊಲೀಸರು, ಅರ್ಧದಷ್ಟು ಸುಟ್ಟುಹೋಗಿದ್ದ ಶವವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಮಹಿಳೆ ಮೀರಾ ಸಿಂಗ್ ಎಂಬಾಕೆಯನ್ನು ಬಂಧಿಸಿದ್ದಾರೆ.</p>.<p>ಮೀರಾ, ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದರು. ದಂಪತಿ ನಿರಂತರವಾಗಿ ಜಗಳವಾಡುತ್ತಿದ್ದರು ಎಂದು ನೆರೆ–ಹೊರೆಯವರು ಹೇಳಿಕೆ ನೀಡಿದ್ದಾರೆ.</p>.<p>ಮನೆಯಿಂದ ಸುಟ್ಟ ವಾಸನೆ ಬರಲಾರಂಭಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಅಕ್ಕ–ಪಕ್ಕದ ಮನೆಯವರು ಪುಣೆಯಲ್ಲಿರುವ ದಂಪತಿಯ ಮಗನಿಗೆ ತಕ್ಷಣವೇ ವಿಷಯ ತಿಳಿಸಿದ್ದಾರೆ.</p>.<p>ಛಾವಣೆ ಮೇಲೆರಿದ್ದ ಮಹಿಳೆ ದೊಣ್ಣೆ ಹಿಡಿದು, ಜನರು ಹತ್ತಿರಕ್ಕೆ ಬರದಂತೆ ಬೆದರಿಸಿದ್ದಾಳೆ. ಅಷ್ಟರಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.</p>.<p>ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.</p>.<p>ನೆರೆ–ಹೊರೆಯವರ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯು ಕಳೆದ ನಾಲ್ಕೈದು ದಿನಗಳಿಂದ ಮನೆಯಿಂದ ಹೊರಗೆ ಬಂದಿರಲಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಶೆಡ್ಪುರ (ಜಾರ್ಖಂಡ್): </strong>ಮಹಿಳೆಯೊಬ್ಬರು ತನ್ನ ಪತಿಯನ್ನು ಕೊಲೆ ಮಾಡಿ, ಮನೆಯಲ್ಲಿಯೇ ಬೆಂಕಿ ಹಚ್ಚಿ ಸುಟ್ಟು ಹಾಕಲು ಯತ್ನಿಸಿರುವ ಪ್ರಕರಣ ಜಮ್ಶೆಡ್ಪುರದ ಸುಭಾಷ್ ಕಾಲೋನಿಯಲ್ಲಿ ವರದಿಯಾಗಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ.</p>.<p>ಆರೋಪಿ ಮಹಿಳೆಯು ಮನೆಯ ಒಳಗಿನಿಂದ ಬಾಗಿಲು ಹಾಕಿಕೊಂಡು, ಯಾರೊಬ್ಬರೂ ಪ್ರವೇಶಿಸದಂತೆ ತಡೆಯಲು ಬಾಗಿಲಿಗೆ ವಿದ್ಯುತ್ ಸಂಪರ್ಕ ನೀಡಿದ್ದಾಳೆ.</p>.<p>ಕೊಲೆಯಾದ ವ್ಯಕ್ತಿಯನ್ನು ಅಮರನಾಥ್ ಸಿಂಗ್ ಎಂದು ಗುರುತಿಸಲಾಗಿದ್ದು, ಟ್ರಾನ್ಸ್ಪೋರ್ಟ್ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ವಿದ್ಯಾಭ್ಯಾಸದ ಕಾರಣದಿಂದ ಬೇರೆ ನಗರಗಳಲ್ಲಿ ಇದ್ದರು.</p>.<p>ಬಾಗಿಲಿಗೆ ವಿದ್ಯುತ್ ಪ್ರವಹಿಸುವಂತೆ ಮಾಡಿದ್ದ ಸಂಪರ್ಕ ಕಡಿತಗೊಳಿಸಿ, ಬಳಿಕ ಮನೆಯೊಳಗೆ ಹೋದ ಪೊಲೀಸರು, ಅರ್ಧದಷ್ಟು ಸುಟ್ಟುಹೋಗಿದ್ದ ಶವವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಮಹಿಳೆ ಮೀರಾ ಸಿಂಗ್ ಎಂಬಾಕೆಯನ್ನು ಬಂಧಿಸಿದ್ದಾರೆ.</p>.<p>ಮೀರಾ, ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದರು. ದಂಪತಿ ನಿರಂತರವಾಗಿ ಜಗಳವಾಡುತ್ತಿದ್ದರು ಎಂದು ನೆರೆ–ಹೊರೆಯವರು ಹೇಳಿಕೆ ನೀಡಿದ್ದಾರೆ.</p>.<p>ಮನೆಯಿಂದ ಸುಟ್ಟ ವಾಸನೆ ಬರಲಾರಂಭಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಅಕ್ಕ–ಪಕ್ಕದ ಮನೆಯವರು ಪುಣೆಯಲ್ಲಿರುವ ದಂಪತಿಯ ಮಗನಿಗೆ ತಕ್ಷಣವೇ ವಿಷಯ ತಿಳಿಸಿದ್ದಾರೆ.</p>.<p>ಛಾವಣೆ ಮೇಲೆರಿದ್ದ ಮಹಿಳೆ ದೊಣ್ಣೆ ಹಿಡಿದು, ಜನರು ಹತ್ತಿರಕ್ಕೆ ಬರದಂತೆ ಬೆದರಿಸಿದ್ದಾಳೆ. ಅಷ್ಟರಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.</p>.<p>ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.</p>.<p>ನೆರೆ–ಹೊರೆಯವರ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯು ಕಳೆದ ನಾಲ್ಕೈದು ದಿನಗಳಿಂದ ಮನೆಯಿಂದ ಹೊರಗೆ ಬಂದಿರಲಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>