<p><strong>ಬೆಂಗಳೂರು:</strong> ಕಪಿಲ್ ಸಿಬಲ್ ಅವರು ಕಾಂಗ್ರೆಸ್ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಉತ್ತರ ಪ್ರದೇಶದ ಸಚಿವ ಜಿತಿನ್ ಪ್ರಸಾದ್ ಅವರು ಹೇಗಿದೆ 'ಪ್ರಸಾದ' ಸಿಬಲ್ ಅವರೇ? ಎಂದು ಕಾಲೆಳೆದಿದ್ದಾರೆ.</p>.<p>ಜಿತಿನ್ ಪ್ರಸಾದ್ ಅವರು ಬಿಜೆಪಿ ಸೇರ್ಪಡೆಗೊಂಡಾಗ ಟ್ವೀಟ್ ಮಾಡಿದ್ದ ಕಪಿಲ್ ಸಿಬಲ್, ಜಿತಿನ್ ಅವರಿಗೆ ಬಿಜೆಪಿಯಿಂದ 'ಪ್ರಸಾದ' ಸಿಗುತ್ತದೆಯೇ ಅಥವಾ ಕೇವಲ ಉತ್ತರ ಪ್ರದೇಶ ಚುನಾವಣೆಯ ಬಲೆಗೆ ಸಿಕ್ಕಿಬಿದ್ದರೇ? ಎಂದು ಪ್ರಶ್ನಿಸಿದ್ದರು.</p>.<p>'ಸಿದ್ಧಾಂತ'ವೆಂಬುದು ಪ್ರಮುಖವೆನಿಸದಿದ್ದಾಗ ಬದಲಾವಣೆ ಬಹಳ ಸುಲಭ ಎಂದು ಸಿಬಲ್ ವ್ಯಂಗ್ಯ ಮಾಡಿದ್ದರು.</p>.<p>ಇದೇ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಜಿತಿನ್ ಪ್ರಸಾದ್, ಹೇಗಿದೆ 'ಪ್ರಸಾದ'? ಎಂದು ಪ್ರಶ್ನಿಸಿದ್ದಾರೆ.</p>.<p>ರಾಜ್ಯಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಿಬಲ್ ಅವರ ಬೆನ್ನಿಗೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಬೆಂಬಲವಾಗಿ ನಿಂತಿದೆ.</p>.<p>ಕಳೆದ ವರ್ಷ ಜೂನ್ ತಿಂಗಳಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಜಿತಿನ್ ಪ್ರಸಾದ್ ಅವರು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿ ಲೋಕೋಪಯೋಗಿ ಖಾತೆ ಸಚಿವರಾಗಿದ್ದಾರೆ.</p>.<p><a href="https://www.prajavani.net/india-news/lynching-accused-in-pak-sentenced-to-death-but-garlanded-in-india-mehbooba-mufti-939641.html" itemprop="url">ಗುಂಪು ಹತ್ಯೆ: ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆಗೆ ಹೋಲಿಸಿ ಮೆಹಬೂಬ ಆಕ್ರೋಶ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಪಿಲ್ ಸಿಬಲ್ ಅವರು ಕಾಂಗ್ರೆಸ್ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಉತ್ತರ ಪ್ರದೇಶದ ಸಚಿವ ಜಿತಿನ್ ಪ್ರಸಾದ್ ಅವರು ಹೇಗಿದೆ 'ಪ್ರಸಾದ' ಸಿಬಲ್ ಅವರೇ? ಎಂದು ಕಾಲೆಳೆದಿದ್ದಾರೆ.</p>.<p>ಜಿತಿನ್ ಪ್ರಸಾದ್ ಅವರು ಬಿಜೆಪಿ ಸೇರ್ಪಡೆಗೊಂಡಾಗ ಟ್ವೀಟ್ ಮಾಡಿದ್ದ ಕಪಿಲ್ ಸಿಬಲ್, ಜಿತಿನ್ ಅವರಿಗೆ ಬಿಜೆಪಿಯಿಂದ 'ಪ್ರಸಾದ' ಸಿಗುತ್ತದೆಯೇ ಅಥವಾ ಕೇವಲ ಉತ್ತರ ಪ್ರದೇಶ ಚುನಾವಣೆಯ ಬಲೆಗೆ ಸಿಕ್ಕಿಬಿದ್ದರೇ? ಎಂದು ಪ್ರಶ್ನಿಸಿದ್ದರು.</p>.<p>'ಸಿದ್ಧಾಂತ'ವೆಂಬುದು ಪ್ರಮುಖವೆನಿಸದಿದ್ದಾಗ ಬದಲಾವಣೆ ಬಹಳ ಸುಲಭ ಎಂದು ಸಿಬಲ್ ವ್ಯಂಗ್ಯ ಮಾಡಿದ್ದರು.</p>.<p>ಇದೇ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಜಿತಿನ್ ಪ್ರಸಾದ್, ಹೇಗಿದೆ 'ಪ್ರಸಾದ'? ಎಂದು ಪ್ರಶ್ನಿಸಿದ್ದಾರೆ.</p>.<p>ರಾಜ್ಯಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಿಬಲ್ ಅವರ ಬೆನ್ನಿಗೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಬೆಂಬಲವಾಗಿ ನಿಂತಿದೆ.</p>.<p>ಕಳೆದ ವರ್ಷ ಜೂನ್ ತಿಂಗಳಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಜಿತಿನ್ ಪ್ರಸಾದ್ ಅವರು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿ ಲೋಕೋಪಯೋಗಿ ಖಾತೆ ಸಚಿವರಾಗಿದ್ದಾರೆ.</p>.<p><a href="https://www.prajavani.net/india-news/lynching-accused-in-pak-sentenced-to-death-but-garlanded-in-india-mehbooba-mufti-939641.html" itemprop="url">ಗುಂಪು ಹತ್ಯೆ: ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆಗೆ ಹೋಲಿಸಿ ಮೆಹಬೂಬ ಆಕ್ರೋಶ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>