ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಮಾತನಾಡಿ, ‘ಹೊರಗಿನವರನ್ನು ಮತದಾರರಾಗಿ ನೋಂದಾಯಿಸಲು ಅವಕಾಶ ನೀಡಿರುವುದು ಪ್ರಜಾಪ್ರಭುತ್ವದ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಂತೆ. ಉದ್ಯೋಗ, ಶಿಕ್ಷಣ ಅಥವಾ ವ್ಯಾಪಾರಕ್ಕಾಗಿ ಹೊರಗಿನವರಿಗೆ ಅವಕಾಶ ನೀಡುವ ಚುನಾವಣಾ ಅಧಿಕಾರಿಗಳ ಕ್ರಮ ಪ್ರಜಾಪ್ರಭುತ್ವ ಕೊನೆಗಾಣಿಸುವ ಗುರಿ ಹೊಂದಿದೆ.ಬಿಜೆಪಿ ತನ್ನ ಪ್ರಯೋಗಗಳಿಗೆ ಜಮ್ಮು ಮತ್ತು ಕಾಶ್ಮೀರವನ್ನು ಪ್ರಯೋಗಾಲಯವಾಗಿ ಪರಿವರ್ತಿಸಿದೆ’ ಎಂದು ಟೀಕಿಸಿದರು.