ಜಾಮೀನು ಅವಧಿಯಲ್ಲಿ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳಬಾರದು. ವಿಳಾಸ ಅಥವಾ ಮೊಬೈಲ್ ಸಂಖ್ಯೆ ಬದಲಿಸಬಾರದು ಎಂದು ಕೋರ್ಟ್ ಸೂಚಿಸಿದೆ. ಇದೇ ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಇತರೆ ಮೂರು ಪ್ರಕರಣದಲ್ಲಿ ಅವರು ಈಗಾಗಲೇ ಜಾಮೀನು ಪಡೆದಿದ್ದರು. ದುಮ್ಕಾ ಖಜಾನೆಯಿಂದ 90ರ ದಶಕದಲ್ಲಿ ಕಾನೂನುಬಾಹಿರವಾಗಿ ₹ 3.13 ಕೋಟಿ ಪಡೆದಿದ್ದ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ.