<p><strong>ರಾಂಚಿ:</strong> ಜೂನ್ 10ರಂದು ರಾಂಚಿಯಲ್ಲಿ ನಡೆದ ಹಿಂಸಾಚಾರದಲ್ಲಿ ಶಾಮೀಲಾದವರ ಫೋಟೊಗಳನ್ನು ಜಾರ್ಖಂಡ್ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಆರೋಪಿಗಳನ್ನು ಗುರುತಿಸಲು ಸಹಾಯ ಮಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ.</p>.<p>ರಾಂಚಿ ಹಿಂಸಾಚಾರಕ್ಕೆ ಸಂಬಂಧಿಸಿ ರಾಜ್ಯಪಾಲ ರಮೇಶ್ ಬೈಸ್ ಅವರು ಡಿಜಿಪಿ ನೀರಜ್ ಸಿನ್ಹಾ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಿದ ಒಂದು ದಿನದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಇಬ್ಬರ ಹತ್ಯೆಯಾಗಿರುವ ಮತ್ತು ಹನ್ನೆರಡಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಹಿಂಸಾಚಾರ ಘಟನೆ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮನ್ಸ್ನಲ್ಲಿ ಪ್ರಶ್ನಿಸಲಾಗಿತ್ತು.</p>.<p>ಹಿಂಸಾಚಾರದಲ್ಲಿ ಭಾಗಿಯಾದ ಸುಮಾರು 30 ಆರೋಪಿಗಳ ಛಾಯಾಚಿತ್ರಗಳನ್ನು ಬಿಡುಗಡೆ ಮಾಡಿದ್ದೇವೆ. ಅವರನ್ನು ಗುರುತಿಸಲು ನಾಗರಿಕರು ಸಹಕರಿಸಬೇಕು. ಈಗಾಗಲೇ ಹಲವು ಶಂಕಿತರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.</p>.<p>ಪ್ರವಾದಿ ಮಹಮ್ಮದರ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತ್ತು.</p>.<p><a href="https://www.prajavani.net/india-news/mahua-moitra-urged-supreme-court-to-take-suo-moto-cognizance-on-bulldozing-homes-945359.html" itemprop="url">ಬುಲ್ಡೋಜರ್ ಆಡಳಿತದ ವಿರುದ್ಧ ಸುಪ್ರೀಂ ಸ್ವಯಂಪ್ರೇರಿತ ದೂರು ದಾಖಲಿಸಲಿ: ಮಹುವಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಜೂನ್ 10ರಂದು ರಾಂಚಿಯಲ್ಲಿ ನಡೆದ ಹಿಂಸಾಚಾರದಲ್ಲಿ ಶಾಮೀಲಾದವರ ಫೋಟೊಗಳನ್ನು ಜಾರ್ಖಂಡ್ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಆರೋಪಿಗಳನ್ನು ಗುರುತಿಸಲು ಸಹಾಯ ಮಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ.</p>.<p>ರಾಂಚಿ ಹಿಂಸಾಚಾರಕ್ಕೆ ಸಂಬಂಧಿಸಿ ರಾಜ್ಯಪಾಲ ರಮೇಶ್ ಬೈಸ್ ಅವರು ಡಿಜಿಪಿ ನೀರಜ್ ಸಿನ್ಹಾ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಿದ ಒಂದು ದಿನದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಇಬ್ಬರ ಹತ್ಯೆಯಾಗಿರುವ ಮತ್ತು ಹನ್ನೆರಡಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಹಿಂಸಾಚಾರ ಘಟನೆ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮನ್ಸ್ನಲ್ಲಿ ಪ್ರಶ್ನಿಸಲಾಗಿತ್ತು.</p>.<p>ಹಿಂಸಾಚಾರದಲ್ಲಿ ಭಾಗಿಯಾದ ಸುಮಾರು 30 ಆರೋಪಿಗಳ ಛಾಯಾಚಿತ್ರಗಳನ್ನು ಬಿಡುಗಡೆ ಮಾಡಿದ್ದೇವೆ. ಅವರನ್ನು ಗುರುತಿಸಲು ನಾಗರಿಕರು ಸಹಕರಿಸಬೇಕು. ಈಗಾಗಲೇ ಹಲವು ಶಂಕಿತರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.</p>.<p>ಪ್ರವಾದಿ ಮಹಮ್ಮದರ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತ್ತು.</p>.<p><a href="https://www.prajavani.net/india-news/mahua-moitra-urged-supreme-court-to-take-suo-moto-cognizance-on-bulldozing-homes-945359.html" itemprop="url">ಬುಲ್ಡೋಜರ್ ಆಡಳಿತದ ವಿರುದ್ಧ ಸುಪ್ರೀಂ ಸ್ವಯಂಪ್ರೇರಿತ ದೂರು ದಾಖಲಿಸಲಿ: ಮಹುವಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>