<p><span style="font-size:11pt;font-family:Arial;color:#000000;background-color:transparent;vertical-align:baseline;white-space:pre-wrap;"><strong>ನವದೆಹಲಿ: ರಾ</strong>ಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಶುಕ್ರವಾರವಷ್ಟೇ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಬೆಂಬಲ ಘೋಷಿಸಿದೆ. ಆದರೆ, ವಿರೋಧಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಮುಖ್ಯಮಂತ್ರಿ ಹಾಗೂ ಜೆಎಂಎಂ ಮುಖ್ಯಸ್ಥ ಹೇಮಂತ್ ಸೊರೇನ್ ಅವರು ತಮ್ಮ ಅಧಿಕೃತ ನಿವಾಸಕ್ಕೆ ಆಹ್ವಾನಿಸಿರುವ ವಿಷಯವು ಈಗ ಚರ್ಚೆಗೆ ಗ್ರಾಸವಾಗಿದೆ.</span></p>.<p><span style="font-size:11pt;font-family:Arial;color:#000000;background-color:transparent;vertical-align:baseline;white-space:pre-wrap;">ಸಿನ್ಹಾ ಅವರ ಆಪ್ತ ಸಹಾಯಕ ಸುಧೀಂದ್ರ ಕುಲಕರ್ಣಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ರಾಜಕೀಯದಲ್ಲಿ ಕಣ್ಣಿಗೆ ಕಾಣುವುದಕ್ಕಿಂತ ಹೆಚ್ಚಿನದು ಯಾವಾಗಲೂ ಇರುತ್ತದೆ. ಜಾರ್ಖಂಡ್ ಮುಖ್ಯಮಂತ್ರಿ ಮತ್ತು ಜೆಎಂಎಂ ಮುಖ್ಯಸ್ಥ ಹೇಮಂತ್ ಸೊರೇನ್ ಅವರು ರಾಷ್ಟ್ರಪತಿ ಚುನಾವಣೆಯ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಶನಿವಾರ ರಾಂಚಿಯಲ್ಲಿರುವ ತಮ್ಮ ಅಧಿಕೃತ ನಿವಾಸಕ್ಕೆ ಆಹ್ವಾನಿಸಿದ್ದಾರೆ’ ಎಂದು ಬರೆದು ಇಬ್ಬರ ಭೇಟಿಯ ಚಿತ್ರವನ್ನೂ ಹಂಚಿಕೊಂಡಿದ್ದಾರೆ.</span></p>.<p><span style="font-size:11pt;font-family:Arial;color:#000000;background-color:transparent;vertical-align:baseline;white-space:pre-wrap;">ಜಾರ್ಖಂಡ್ನವರೇ ಆದ ಯಶವಂತ ಸಿನ್ಹಾ ಅವರು ಜೂನ್ 24ರಂದು ರಾಷ್ಟ್ರಪತಿ ಚುನಾವಣೆಯ ಪ್ರಚಾರ ಕಾರ್ಯ ಆರಂಭಿಸಬೇಕಿತ್ತು. ಆದರೆ, ಜೆಎಂಎಂ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದರಿಂದ ಅವರಿಗೆ ಬೆಂಬಲಿಸುವ ಕುರಿತು ಚಿಂತಿಸಿತ್ತು. ಈ ಕಾರಣಕ್ಕಾಗಿ ಸಿನ್ಹಾ ಪ್ರಚಾರದ ಕಾರ್ಯಸೂಚಿಯನ್ನು ಬದಲಿಸಿಕೊಂಡಿದ್ದರು.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size:11pt;font-family:Arial;color:#000000;background-color:transparent;vertical-align:baseline;white-space:pre-wrap;"><strong>ನವದೆಹಲಿ: ರಾ</strong>ಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಶುಕ್ರವಾರವಷ್ಟೇ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಬೆಂಬಲ ಘೋಷಿಸಿದೆ. ಆದರೆ, ವಿರೋಧಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಮುಖ್ಯಮಂತ್ರಿ ಹಾಗೂ ಜೆಎಂಎಂ ಮುಖ್ಯಸ್ಥ ಹೇಮಂತ್ ಸೊರೇನ್ ಅವರು ತಮ್ಮ ಅಧಿಕೃತ ನಿವಾಸಕ್ಕೆ ಆಹ್ವಾನಿಸಿರುವ ವಿಷಯವು ಈಗ ಚರ್ಚೆಗೆ ಗ್ರಾಸವಾಗಿದೆ.</span></p>.<p><span style="font-size:11pt;font-family:Arial;color:#000000;background-color:transparent;vertical-align:baseline;white-space:pre-wrap;">ಸಿನ್ಹಾ ಅವರ ಆಪ್ತ ಸಹಾಯಕ ಸುಧೀಂದ್ರ ಕುಲಕರ್ಣಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ರಾಜಕೀಯದಲ್ಲಿ ಕಣ್ಣಿಗೆ ಕಾಣುವುದಕ್ಕಿಂತ ಹೆಚ್ಚಿನದು ಯಾವಾಗಲೂ ಇರುತ್ತದೆ. ಜಾರ್ಖಂಡ್ ಮುಖ್ಯಮಂತ್ರಿ ಮತ್ತು ಜೆಎಂಎಂ ಮುಖ್ಯಸ್ಥ ಹೇಮಂತ್ ಸೊರೇನ್ ಅವರು ರಾಷ್ಟ್ರಪತಿ ಚುನಾವಣೆಯ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಶನಿವಾರ ರಾಂಚಿಯಲ್ಲಿರುವ ತಮ್ಮ ಅಧಿಕೃತ ನಿವಾಸಕ್ಕೆ ಆಹ್ವಾನಿಸಿದ್ದಾರೆ’ ಎಂದು ಬರೆದು ಇಬ್ಬರ ಭೇಟಿಯ ಚಿತ್ರವನ್ನೂ ಹಂಚಿಕೊಂಡಿದ್ದಾರೆ.</span></p>.<p><span style="font-size:11pt;font-family:Arial;color:#000000;background-color:transparent;vertical-align:baseline;white-space:pre-wrap;">ಜಾರ್ಖಂಡ್ನವರೇ ಆದ ಯಶವಂತ ಸಿನ್ಹಾ ಅವರು ಜೂನ್ 24ರಂದು ರಾಷ್ಟ್ರಪತಿ ಚುನಾವಣೆಯ ಪ್ರಚಾರ ಕಾರ್ಯ ಆರಂಭಿಸಬೇಕಿತ್ತು. ಆದರೆ, ಜೆಎಂಎಂ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದರಿಂದ ಅವರಿಗೆ ಬೆಂಬಲಿಸುವ ಕುರಿತು ಚಿಂತಿಸಿತ್ತು. ಈ ಕಾರಣಕ್ಕಾಗಿ ಸಿನ್ಹಾ ಪ್ರಚಾರದ ಕಾರ್ಯಸೂಚಿಯನ್ನು ಬದಲಿಸಿಕೊಂಡಿದ್ದರು.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>