ವಿಶ್ವವಿದ್ಯಾಲಯದ ಕಾವೇರಿ ಹಾಸ್ಟೆಲ್ನಲ್ಲಿ ಭಾನುವಾರ ರಾತ್ರಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಸಂಘರ್ಷ ನಡೆದಿತ್ತು. ಹಾಸ್ಟೆಲ್ನಲ್ಲಿ ರಾಮನವಮಿ ದಿನ ಮಾಂಸಾಹಾರ ಪೂರೈಕೆಗೆ ಸಂಬಂಧಿಸಿ ಈ ಸಂಘರ್ಷ ಏರ್ಪಟ್ಟಿತ್ತು. ಪ್ರಕರಣ ದಾಖಲು:ಎಬಿವಿಪಿಯ ಸದಸ್ಯರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಷನ್ (ಡಿಎಸ್ಎಫ್) ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್ಎ) ಸದಸ್ಯರು ಎಬಿವಿಪಿ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ ಮನೋಜ್ ಸಿ. ತಿಳಿಸಿದ್ದಾರೆ. ದೂರು ನೀಡುವುದಾಗಿ ಎಬಿವಿಪಿ ಸದಸ್ಯರೂ ಹೇಳಿದ್ದಾರೆ. ಆ ದೂರಿನ ಬಳಿಕ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.