<p><strong>ನವದೆಹಲಿ</strong>: ‘ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವು (ಜೆಎನ್ಯು) ವಿದ್ಯಾರ್ಥಿಗಳ ಮೇಲೆ ಆಹಾರದ ಆಯ್ಕೆಯನ್ನು ಹೇರುವುದಿಲ್ಲ. ವಿದ್ಯಾರ್ಥಿಗಳು ಚರ್ಚೆ ಮತ್ತು ಚಳವಳಿ ನಡೆಸಬಹುದು. ಆದರೆ, ಹಿಂಸಾಚಾರದಲ್ಲಿ ಪಾಲ್ಗೊಳ್ಳಬಾರದು’ ಎಂದು ವಿವಿ ಕುಲಪತಿ ಶಾಂತಿಶ್ರೀ ಧೂಲಿಪುಡಿ ಪಂಡಿತ್ ಬುಧವಾರ ಜೆಎನ್ಯು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>ರಾಮನವಮಿ ಹಬ್ಬದಂದು ಕೆಲವು ವಿದ್ಯಾರ್ಥಿಗಳು ವಿ.ವಿ ಕ್ಯಾಂಪಸ್ನಲ್ಲಿ ಪೂಜೆ ಆಯೋಜಿಸಿದ್ದ ಕಾರಣಕ್ಕೆ ಹಾಸ್ಟೆಲ್ ಮೆಸ್ನಲ್ಲಿ ಮಾಂಸಾಹಾರ ಬಡಿಸಬಾರದೆಂದು ಒತ್ತಾಯಿಸಿದ ಸಂಬಂಧ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಈ ಬೆಳವಣಿಗೆಯ ನಂತರ ಕುಲಪತಿ ಈ ಎಚ್ಚರಿಕೆ ನೀಡಿದ್ದಾರೆ.</p>.<p>‘ವಿಶ್ವವಿದ್ಯಾಲಯವು ಯಾವುದೇ ವಿದ್ಯಾರ್ಥಿಯ ಮೇಲೆ ಯಾವುದೇ ಆಹಾರದ ಆಯ್ಕೆಯನ್ನು ಹೇರುವುದಿಲ್ಲ. ಆಹಾರದ ಆಯ್ಕೆ ವೈಯಕ್ತಿಕ ಹಕ್ಕು ಮತ್ತು ಮೂಲಭೂತ ಹಕ್ಕು. ವಿದ್ಯಾರ್ಥಿಗಳುಚರ್ಚೆ, ಆಂದೋಲನ ನಡೆಸಲಿ. ಆದರೆ, ಹಿಂಸಾಚಾರದಲ್ಲಿ ಭಾಗಿಯಾಗುವುದನ್ನು ಸಹಿಸಲ್ಲ’ ಎಂದು ಅವರು ಹೇಳಿದರು.</p>.<p>ಪಂಡಿತ್ ಅವರು, ಜೆಎನ್ಯು ವಿದ್ಯಾರ್ಥಿ ಸಂಘ ಮತ್ತು ಎಬಿವಿಪಿ ಸದಸ್ಯರನ್ನು ಭೇಟಿಯಾದರು.ವಿಶ್ವವಿದ್ಯಾಲಯದಲ್ಲಿ ತಾವು ವಿದ್ಯಾರ್ಥಿಯಾಗಿದ್ದ ದಿನಗಳನ್ನು ನೆನಪಿಸಿಕೊಂಡ ಅವರು, ಆಗ ಯಾವುದೇ ಧಾರ್ಮಿಕ ಹಬ್ಬಗಳಿಗೆ ವಿವಿಯಲ್ಲಿ ಅವಕಾಶವಿರಲಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವು (ಜೆಎನ್ಯು) ವಿದ್ಯಾರ್ಥಿಗಳ ಮೇಲೆ ಆಹಾರದ ಆಯ್ಕೆಯನ್ನು ಹೇರುವುದಿಲ್ಲ. ವಿದ್ಯಾರ್ಥಿಗಳು ಚರ್ಚೆ ಮತ್ತು ಚಳವಳಿ ನಡೆಸಬಹುದು. ಆದರೆ, ಹಿಂಸಾಚಾರದಲ್ಲಿ ಪಾಲ್ಗೊಳ್ಳಬಾರದು’ ಎಂದು ವಿವಿ ಕುಲಪತಿ ಶಾಂತಿಶ್ರೀ ಧೂಲಿಪುಡಿ ಪಂಡಿತ್ ಬುಧವಾರ ಜೆಎನ್ಯು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>ರಾಮನವಮಿ ಹಬ್ಬದಂದು ಕೆಲವು ವಿದ್ಯಾರ್ಥಿಗಳು ವಿ.ವಿ ಕ್ಯಾಂಪಸ್ನಲ್ಲಿ ಪೂಜೆ ಆಯೋಜಿಸಿದ್ದ ಕಾರಣಕ್ಕೆ ಹಾಸ್ಟೆಲ್ ಮೆಸ್ನಲ್ಲಿ ಮಾಂಸಾಹಾರ ಬಡಿಸಬಾರದೆಂದು ಒತ್ತಾಯಿಸಿದ ಸಂಬಂಧ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಈ ಬೆಳವಣಿಗೆಯ ನಂತರ ಕುಲಪತಿ ಈ ಎಚ್ಚರಿಕೆ ನೀಡಿದ್ದಾರೆ.</p>.<p>‘ವಿಶ್ವವಿದ್ಯಾಲಯವು ಯಾವುದೇ ವಿದ್ಯಾರ್ಥಿಯ ಮೇಲೆ ಯಾವುದೇ ಆಹಾರದ ಆಯ್ಕೆಯನ್ನು ಹೇರುವುದಿಲ್ಲ. ಆಹಾರದ ಆಯ್ಕೆ ವೈಯಕ್ತಿಕ ಹಕ್ಕು ಮತ್ತು ಮೂಲಭೂತ ಹಕ್ಕು. ವಿದ್ಯಾರ್ಥಿಗಳುಚರ್ಚೆ, ಆಂದೋಲನ ನಡೆಸಲಿ. ಆದರೆ, ಹಿಂಸಾಚಾರದಲ್ಲಿ ಭಾಗಿಯಾಗುವುದನ್ನು ಸಹಿಸಲ್ಲ’ ಎಂದು ಅವರು ಹೇಳಿದರು.</p>.<p>ಪಂಡಿತ್ ಅವರು, ಜೆಎನ್ಯು ವಿದ್ಯಾರ್ಥಿ ಸಂಘ ಮತ್ತು ಎಬಿವಿಪಿ ಸದಸ್ಯರನ್ನು ಭೇಟಿಯಾದರು.ವಿಶ್ವವಿದ್ಯಾಲಯದಲ್ಲಿ ತಾವು ವಿದ್ಯಾರ್ಥಿಯಾಗಿದ್ದ ದಿನಗಳನ್ನು ನೆನಪಿಸಿಕೊಂಡ ಅವರು, ಆಗ ಯಾವುದೇ ಧಾರ್ಮಿಕ ಹಬ್ಬಗಳಿಗೆ ವಿವಿಯಲ್ಲಿ ಅವಕಾಶವಿರಲಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>