ಭಿಂದ್(ಮಧ್ಯಪ್ರದೇಶ):ಕೊರೊನಾ ವೈರಸ್ಲಾಕ್ಡೌನ್ನಿಂದಾಗಿ ಕೆಲಸ ಕಳೆದುಕೊಂಡಿದ್ದ ಕಾರ್ಮಿಕನೊಬ್ಬ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜೇಶ್ ರಾಜಕ್ (42) ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಕೆಲಸ ಕಳೆದುಕೊಂಡ ಬಳಿಕಅಂಧಿಯಾರಿ ಗ್ರಾಮಕ್ಕೆ ವಾಪಸಾಗಿದ್ದರು.ಹಣಕಾಸು ವಿಚಾರವಾಗಿರಾಜೇಶ್, ಪತ್ನಿಯೊಂದಿಗೆ ಜಗಳವಾಡುತ್ತಿದ್ದಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಂಪತಿ ನಡುವೆ ಶುಕ್ರವಾರ ರಾತ್ರಿಯೂ ಜಗಳ ನಡೆದಿದ್ದು, ರಾಜೇಶ್ ತನ್ನ ಹೆಣ್ಣು ಮಕ್ಕಳಾದ ಅನುಷ್ಕಾ(10), ಚೀನಾ (8), ಸಂಧ್ಯಾ (5) ರನ್ನು ಹಗ್ಗದಿಂದ ಸೊಂಟಕ್ಕೆ ಕಟ್ಟಿಕೊಂಡು ಮನೆ ಸಮೀಪವಿರುವ ಬಾವಿಗೆ ಹಾರಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ದಂಪತಿಗೆ ಇನ್ನೂ ಎರಡೂವರೆ ವರ್ಷದ ಮಗಳು ಇರುವುದಾಗಿ ತಿಳಿದು ಬಂದಿದ್ದು,ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಇನ್ಸ್ಪೆಕ್ಟರ್ ರಾಜೇಶ್ ಹೀಗಂಕರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.