<p><strong>ಭಿಂದ್(ಮಧ್ಯಪ್ರದೇಶ):</strong>ಕೊರೊನಾ ವೈರಸ್ಲಾಕ್ಡೌನ್ನಿಂದಾಗಿ ಕೆಲಸ ಕಳೆದುಕೊಂಡಿದ್ದ ಕಾರ್ಮಿಕನೊಬ್ಬ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಜೇಶ್ ರಾಜಕ್ (42) ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಕೆಲಸ ಕಳೆದುಕೊಂಡ ಬಳಿಕಅಂಧಿಯಾರಿ ಗ್ರಾಮಕ್ಕೆ ವಾಪಸಾಗಿದ್ದರು.ಹಣಕಾಸು ವಿಚಾರವಾಗಿರಾಜೇಶ್, ಪತ್ನಿಯೊಂದಿಗೆ ಜಗಳವಾಡುತ್ತಿದ್ದಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ದಂಪತಿ ನಡುವೆ ಶುಕ್ರವಾರ ರಾತ್ರಿಯೂ ಜಗಳ ನಡೆದಿದ್ದು, ರಾಜೇಶ್ ತನ್ನ ಹೆಣ್ಣು ಮಕ್ಕಳಾದ ಅನುಷ್ಕಾ(10), ಚೀನಾ (8), ಸಂಧ್ಯಾ (5) ರನ್ನು ಹಗ್ಗದಿಂದ ಸೊಂಟಕ್ಕೆ ಕಟ್ಟಿಕೊಂಡು ಮನೆ ಸಮೀಪವಿರುವ ಬಾವಿಗೆ ಹಾರಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ದಂಪತಿಗೆ ಇನ್ನೂ ಎರಡೂವರೆ ವರ್ಷದ ಮಗಳು ಇರುವುದಾಗಿ ತಿಳಿದು ಬಂದಿದ್ದು,ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಇನ್ಸ್ಪೆಕ್ಟರ್ ರಾಜೇಶ್ ಹೀಗಂಕರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಿಂದ್(ಮಧ್ಯಪ್ರದೇಶ):</strong>ಕೊರೊನಾ ವೈರಸ್ಲಾಕ್ಡೌನ್ನಿಂದಾಗಿ ಕೆಲಸ ಕಳೆದುಕೊಂಡಿದ್ದ ಕಾರ್ಮಿಕನೊಬ್ಬ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಜೇಶ್ ರಾಜಕ್ (42) ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಕೆಲಸ ಕಳೆದುಕೊಂಡ ಬಳಿಕಅಂಧಿಯಾರಿ ಗ್ರಾಮಕ್ಕೆ ವಾಪಸಾಗಿದ್ದರು.ಹಣಕಾಸು ವಿಚಾರವಾಗಿರಾಜೇಶ್, ಪತ್ನಿಯೊಂದಿಗೆ ಜಗಳವಾಡುತ್ತಿದ್ದಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ದಂಪತಿ ನಡುವೆ ಶುಕ್ರವಾರ ರಾತ್ರಿಯೂ ಜಗಳ ನಡೆದಿದ್ದು, ರಾಜೇಶ್ ತನ್ನ ಹೆಣ್ಣು ಮಕ್ಕಳಾದ ಅನುಷ್ಕಾ(10), ಚೀನಾ (8), ಸಂಧ್ಯಾ (5) ರನ್ನು ಹಗ್ಗದಿಂದ ಸೊಂಟಕ್ಕೆ ಕಟ್ಟಿಕೊಂಡು ಮನೆ ಸಮೀಪವಿರುವ ಬಾವಿಗೆ ಹಾರಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ದಂಪತಿಗೆ ಇನ್ನೂ ಎರಡೂವರೆ ವರ್ಷದ ಮಗಳು ಇರುವುದಾಗಿ ತಿಳಿದು ಬಂದಿದ್ದು,ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಇನ್ಸ್ಪೆಕ್ಟರ್ ರಾಜೇಶ್ ಹೀಗಂಕರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>