ಪುಣೆಯ ಖಡಕ್ವಾಸ್ಲಾದಲ್ಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ (ಎನ್ಡಿಎ) 140ನೇ ತಂಡದ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಇತ್ತೀಚಿನ ದಿನಗಳಲ್ಲಿ ಯುದ್ಧ ಸ್ವರೂಪಗಳು ಬದಲಾಗುತ್ತಿವೆ. ವಾಯು, ಜಲ, ಬಾಹ್ಯಾಕಾಶ, ಸೈಬರ್ ಕ್ಷೇತ್ರಗಳಲ್ಲೂ ವಿರೋಧಿಗಳನ್ನು ಎದುರಿಸಬೇಕಾಗಿದೆ. ಹಾಗಾಗಿ ಮೂರು ರಕ್ಷಣಾ ಪಡೆಗಳು ಒಟ್ಟಾಗಿ ಕಾರ್ಯನಿರ್ವಹಿಸುವುದು ಮೊದಲಿಗಿಂತ ಹೆಚ್ಚು ಅವಶ್ಯಕ’ ಎಂದರು.