ತಪೋವನ-ವಿಷ್ಣುಗಡ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ನಿರ್ಮಾಣ ಕಾಮಗಾರಿಯೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ (ಎನ್ಟಿಪಿಸಿ) ವಿರುದ್ಧ ಸ್ಥಳೀಯರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಆದರೆ ಎನ್ಟಿಪಿಸಿ ಈ ಆರೋಪವನ್ನು ತಳ್ಳಿ ಹಾಕಿದೆ. ನಮ್ಮ ಸುರಂಗ ಮಾರ್ಗ ಜೋಶಿಮಠವನ್ನು ಹಾದು ಹೋಗಿಲ್ಲ ಎಂದು ಸ್ಪಷ್ಟಪಡಿಸಿದೆ.