ಜಿಲ್ಲಾಡಳಿತ ಪಟ್ಟಣದಲ್ಲಿ 200ಕ್ಕೂ ಹೆಚ್ಚು ಮನೆಗಳು ವಾಸಕ್ಕೆ ಅಸುರಕ್ಷಿತವೆಂದು ಕೆಂಪು ಗೆರೆಗಳಿಂದ ಗುರುತಿಸಿದೆ. ಪರಿಹಾರ ನೆಲೆ ಅಥವಾ ಬಾಡಿಗೆ ಮನೆಗಳಿಗೆ ತೆರಳುವಂತೆ ನಾಗರಿಕರಿಗೆ ಸೂಚಿಸಿರುವ ಜಿಲ್ಲಾಡಳಿತ, ಸಂತ್ರಸ್ತ ಪ್ರತಿ ಕುಟುಂಬಕ್ಕೆ ತಿಂಗಳಿಗೆ ₹ 4,000 ನೆರವನ್ನು ಮುಂದಿನ ಆರು ತಿಂಗಳವರೆಗೆ ನೀಡುವುದಾಗಿ ಭರವಸೆ ನೀಡಿದೆ.