<p><strong>ಡೆಹ್ರಾಡೂನ್:</strong> ಕುಸಿಯುತ್ತಿರುವ ಐತಿಹಾಸಿಕ ಜೋಶಿಮಠ ಪಟ್ಟಣದ ರಕ್ಷಣೆಯ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿ ಅಲ್ಲಿನ ನಿವಾಸಿಗಳು ಶುಕ್ರವಾರ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ.</p>.<p>ಪಟ್ಟಣ ಕುಸಿತದಿಂದ ಪರಿಣಾಮ ಎದುರಿಸುತ್ತಿರುವ ಕುಟುಂಬಗಳಿಗೆ ಪರಿಹಾರ ಹಾಗೂ ಶಾಶ್ವತ ಪುನರ್ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿ ‘ಜೋಶಿಮಠ ಬಚಾವೋ ಸಂಘರ್ಷ ಸಮಿತಿ‘ ಪ್ರತಿಭಟನೆ ಮಾಡಿ ಆಗ್ರಹಿಸಿದೆ.</p>.<p>ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು, ತಪೋವನ ಟಾಕ್ಸಿ ನಿಲ್ದಾಣದಿಂದ ರ್ಯಾಲಿ ಆರಂಭಿಸಿ ಸಿಂಗ್ಧರ್ ವಾರ್ಡ್ನ ವೇದ ವೇದಂಗ ಮೈದಾನದಲ್ಲಿ ಜಮಾವಣೆಗೊಂಡರು. ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಜೋಶಿಮಠವನ್ನು ರಕ್ಷಣೆ ಮಾಡಬೇಕು ಎನ್ನುವ ತುರ್ತು ಕಾಣಿಸುತ್ತಿಲ್ಲ. ಬದ್ರಿನಾಥ ನಿವಾಸಿಗಳಿಗೆ ಪರಿಹಾರ ಹಾಗೂ ಶಾಶ್ವತ ಪುನರ್ವಸತಿ ಕಲ್ಪಿಸುವ ಹಾಗೂ ಎನ್ಟಿಪಿಸಿ ಯೋಜನೆಯನ್ನು ರದ್ದು ಮಾಡುವ ಭರವಸೆ ಈಡೇರಲಿಲ್ಲ‘ ಎಂದು ಜೋಶಿಮಠ ಬಚಾವೋ ಸಂಘರ್ಷ ಸಮಿತಿ ವಕ್ತಾರ ಕಮಲ್ ರಾತುರಿ ಹೇಳಿದರು.</p>.<p>ತಪೋವನ ವಿಷ್ಣುಗಢ ಜಲ ವಿದ್ಯುತ್ ಯೋಜನೆಗೆ ರಾಷ್ಟ್ರೀಯ ಶಾಖೋತ್ಪನ್ನ ನಿಗಮ 12 ಕಿ.ಮಿ ಸುರಂಗ ಕೊರೆಯುತ್ತಿರುವುದೇ ಇದಕ್ಕೆ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> ಕುಸಿಯುತ್ತಿರುವ ಐತಿಹಾಸಿಕ ಜೋಶಿಮಠ ಪಟ್ಟಣದ ರಕ್ಷಣೆಯ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿ ಅಲ್ಲಿನ ನಿವಾಸಿಗಳು ಶುಕ್ರವಾರ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ.</p>.<p>ಪಟ್ಟಣ ಕುಸಿತದಿಂದ ಪರಿಣಾಮ ಎದುರಿಸುತ್ತಿರುವ ಕುಟುಂಬಗಳಿಗೆ ಪರಿಹಾರ ಹಾಗೂ ಶಾಶ್ವತ ಪುನರ್ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿ ‘ಜೋಶಿಮಠ ಬಚಾವೋ ಸಂಘರ್ಷ ಸಮಿತಿ‘ ಪ್ರತಿಭಟನೆ ಮಾಡಿ ಆಗ್ರಹಿಸಿದೆ.</p>.<p>ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು, ತಪೋವನ ಟಾಕ್ಸಿ ನಿಲ್ದಾಣದಿಂದ ರ್ಯಾಲಿ ಆರಂಭಿಸಿ ಸಿಂಗ್ಧರ್ ವಾರ್ಡ್ನ ವೇದ ವೇದಂಗ ಮೈದಾನದಲ್ಲಿ ಜಮಾವಣೆಗೊಂಡರು. ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಜೋಶಿಮಠವನ್ನು ರಕ್ಷಣೆ ಮಾಡಬೇಕು ಎನ್ನುವ ತುರ್ತು ಕಾಣಿಸುತ್ತಿಲ್ಲ. ಬದ್ರಿನಾಥ ನಿವಾಸಿಗಳಿಗೆ ಪರಿಹಾರ ಹಾಗೂ ಶಾಶ್ವತ ಪುನರ್ವಸತಿ ಕಲ್ಪಿಸುವ ಹಾಗೂ ಎನ್ಟಿಪಿಸಿ ಯೋಜನೆಯನ್ನು ರದ್ದು ಮಾಡುವ ಭರವಸೆ ಈಡೇರಲಿಲ್ಲ‘ ಎಂದು ಜೋಶಿಮಠ ಬಚಾವೋ ಸಂಘರ್ಷ ಸಮಿತಿ ವಕ್ತಾರ ಕಮಲ್ ರಾತುರಿ ಹೇಳಿದರು.</p>.<p>ತಪೋವನ ವಿಷ್ಣುಗಢ ಜಲ ವಿದ್ಯುತ್ ಯೋಜನೆಗೆ ರಾಷ್ಟ್ರೀಯ ಶಾಖೋತ್ಪನ್ನ ನಿಗಮ 12 ಕಿ.ಮಿ ಸುರಂಗ ಕೊರೆಯುತ್ತಿರುವುದೇ ಇದಕ್ಕೆ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>