ಪಶ್ಚಿಮ ಬಂಗಾಳಕ್ಕೆ ಬುಧವಾರ ಭೇಟಿ ನೀಡಿ ಮಾತನಾಡಿರುವ ಅವರು, 'ಕೌಟುಂಬಿಕ ಹಿಂಸೆ, ಮಾನವ ಕಳ್ಳಸಾಗಣೆ ಮತ್ತು ಅತ್ಯಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳು ಪಶ್ಚಿಮ ಬಂಗಾಳದಲ್ಲಿ ಅಧಿಕವಾಗಿವೆ. ಆದರೆ, ಈ ಅಂಕಿ-ಸಂಖ್ಯೆಗಳನ್ನು ಅಪರಾಧ ಸಂಸ್ಥೆಗೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ಕೋವಿಡ್ಗೆ ಸಂಬಂಧಿಸಿದ ಅಂಕಿ-ಸಂಖ್ಯೆಗಳನ್ನೂ ಸಹ ಅವರು ನೀಡುತ್ತಿಲ್ಲ' ಎಂದು ಆರೋಪಿಸಿದ್ದಾರೆ.